ಉಡುಪಿ ಪೌರ ಕಾರ್ಮಿಕನ ಮೇಲೆ ಹಲ್ಲೆ : ಆರೋಪಿ ಕಾಂಗ್ರೆಸ್ ಅಥವಾ ಇತರ ಪಕ್ಷದ ಬೆಂಬಲಿತ ಮುಸ್ಲಿಂ ಆಗಿದ್ದರೆ, ಇಷ್ಟೊತ್ತಿಗೆ ಬಿಜೆಪಿ ನಾಯಕರು ಜಿಲ್ಲೆಯಲ್ಲಿ ಕೋಮು ಸಂಘರ್ಷ ವಾಗುವ ಹೇಳಿಕೆ ನೀಡುತ್ತಿದ್ದರು : ದೀಪಕ್ ಕೋಟ್ಯಾನ್ -Vishwanews24

Featured, ಉಡುಪಿ

ಉಡುಪಿ ಪೌರ ಕಾರ್ಮಿಕನ ಮೇಲೆ ಹಲ್ಲೆ : ಆರೋಪಿ ಕಾಂಗ್ರೆಸ್ ಅಥವಾ ಇತರ ಪಕ್ಷದ ಬೆಂಬಲಿತ ಮುಸ್ಲಿಂ ಆಗಿದ್ದರೆ, ಇಷ್ಟೊತ್ತಿಗೆ ಬಿಜೆಪಿ ನಾಯಕರು ಜಿಲ್ಲೆಯಲ್ಲಿ ಕೋಮು ಸಂಘರ್ಷ ವಾಗುವ ಹೇಳಿಕೆ ನೀಡುತ್ತಿದ್ದರು : ದೀಪಕ್ ಕೋಟ್ಯಾನ್ -Vishwanews24

ಉಡುಪಿ, : ಅವಿಭಜಿತ ಜಿಲ್ಲೆಯಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆದಾಗ, ತಾವುಗಳು ಹಿಂದೂ ಮುಖಂಡ ರೆಂಬಂತೆ ದೊಡ್ಡದಾಗಿ ಭಾಷಣ ಬಿಗಿದು, ಬೆಂಕಿ ಕೊಡುತ್ತೇವೆ ಎನ್ನುವ ಹೇಳಿಕೆ ನೀಡುವ ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದಾಜ್ಲೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಈಗ ಎಲ್ಲಿದ್ದಾರೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಪ್ರಶ್ನಿಸಿದ್ದಾರೆ.

ಉಡುಪಿ ನಗರದದಲ್ಲಿ ಮಾ.೧೨ರ ಶುಕ್ರವಾರ ಬಿಜೆಪಿ ಅಲ್ಪಸಂಖ್ಯಾತ ಅಧ್ಯಕ್ಷರ ಸಹೋದರರಿಂದ ಹಲ್ಲೆಗೊಳಗಾಗಿರುವ ಪೌರಕಾರ್ಮಿಕನ ಪರವಾಗಿ ಯಾವುದೇ ಹೇಳಿಕೆ ನೀಡದ ಸಂಸದ ಮತ್ತು ಶಾಸಕರ ವಿರುದ್ಧ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ರಮಿತಾ ಶೈಲೇಂದ್ರ ರಾವ್ ಅವರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ -Vishwanews24

ಕಾಂಗ್ರೆಸ್ ಅಥವಾ ಇತರ ಪಕ್ಷದ ಬೆಂಬಲಿತ ಮುಸ್ಲಿಂ ಆಗಿದ್ದರೆ, ಇಷ್ಟೊತ್ತಿಗೆ ಈ ನಾಯಕರು ಉಡುಪಿ ಜಿಲ್ಲೆಯಲ್ಲಿ ಕೋಮು ಸಂಘರ್ಷ ವಾಗುವ ಹೇಳಿಕೆ ನೀಡುತ್ತಿದ್ದರು. ಆದರೆ ಹಿಂದು ಪೌರ ಕಾರ್ಮಿಕನ ಮೇಲೆ ದಾಳಿ ಮಾಡಿದ್ದು ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರ ಸಹೋದರರಿಂದ. ಹಲ್ಲೆ ಯಾದವರು ಮತ್ತು ಹಲ್ಲೆ ಮಾಡಿದವರು ಯಾರು ಎಂಬುದನ್ನು ಹುಡುಕುವ ಬದಲು ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕು. ಜಾತಿ ಜಾತಿ ನಡುವೆ ಸಂಘರ್ಷ ತರುವ ಬಿಜೆಪಿ ನಾಯಕರು ಇನ್ನಾದರೂ ಅರ್ಥಮಾಡಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ತಿಳಿಸಿದೆ.

ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24

ನಗರವನ್ನು ಸ್ವಚ್ಛವಾಗಿಡಲು ನಗರದ ಪೌರ ಕಾರ್ಮಿಕರ ಸೇವೆ ಶಾಘ್ಲನೀಯ. ಆದರೆ ಇಂತಹ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದದ್ದು ಖಂಡನೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ದೀಪಕ್ ಕೋಟ್ಯಾನ್ ಇನ್ನಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ:ನಗರಸಭೆ ಪೌರ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ -Vishwanews24