ಉಡುಪಿ, : ಅವಿಭಜಿತ ಜಿಲ್ಲೆಯಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆದಾಗ, ತಾವುಗಳು ಹಿಂದೂ ಮುಖಂಡ ರೆಂಬಂತೆ ದೊಡ್ಡದಾಗಿ ಭಾಷಣ ಬಿಗಿದು, ಬೆಂಕಿ ಕೊಡುತ್ತೇವೆ ಎನ್ನುವ ಹೇಳಿಕೆ ನೀಡುವ ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದಾಜ್ಲೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಈಗ ಎಲ್ಲಿದ್ದಾರೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಪ್ರಶ್ನಿಸಿದ್ದಾರೆ.
ಉಡುಪಿ ನಗರದದಲ್ಲಿ ಮಾ.೧೨ರ ಶುಕ್ರವಾರ ಬಿಜೆಪಿ ಅಲ್ಪಸಂಖ್ಯಾತ ಅಧ್ಯಕ್ಷರ ಸಹೋದರರಿಂದ ಹಲ್ಲೆಗೊಳಗಾಗಿರುವ ಪೌರಕಾರ್ಮಿಕನ ಪರವಾಗಿ ಯಾವುದೇ ಹೇಳಿಕೆ ನೀಡದ ಸಂಸದ ಮತ್ತು ಶಾಸಕರ ವಿರುದ್ಧ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ರಮಿತಾ ಶೈಲೇಂದ್ರ ರಾವ್ ಅವರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ -Vishwanews24
ಕಾಂಗ್ರೆಸ್ ಅಥವಾ ಇತರ ಪಕ್ಷದ ಬೆಂಬಲಿತ ಮುಸ್ಲಿಂ ಆಗಿದ್ದರೆ, ಇಷ್ಟೊತ್ತಿಗೆ ಈ ನಾಯಕರು ಉಡುಪಿ ಜಿಲ್ಲೆಯಲ್ಲಿ ಕೋಮು ಸಂಘರ್ಷ ವಾಗುವ ಹೇಳಿಕೆ ನೀಡುತ್ತಿದ್ದರು. ಆದರೆ ಹಿಂದು ಪೌರ ಕಾರ್ಮಿಕನ ಮೇಲೆ ದಾಳಿ ಮಾಡಿದ್ದು ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರ ಸಹೋದರರಿಂದ. ಹಲ್ಲೆ ಯಾದವರು ಮತ್ತು ಹಲ್ಲೆ ಮಾಡಿದವರು ಯಾರು ಎಂಬುದನ್ನು ಹುಡುಕುವ ಬದಲು ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕು. ಜಾತಿ ಜಾತಿ ನಡುವೆ ಸಂಘರ್ಷ ತರುವ ಬಿಜೆಪಿ ನಾಯಕರು ಇನ್ನಾದರೂ ಅರ್ಥಮಾಡಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ತಿಳಿಸಿದೆ.
ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24
ನಗರವನ್ನು ಸ್ವಚ್ಛವಾಗಿಡಲು ನಗರದ ಪೌರ ಕಾರ್ಮಿಕರ ಸೇವೆ ಶಾಘ್ಲನೀಯ. ಆದರೆ ಇಂತಹ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದದ್ದು ಖಂಡನೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ದೀಪಕ್ ಕೋಟ್ಯಾನ್ ಇನ್ನಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ:ನಗರಸಭೆ ಪೌರ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…