ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

Featured, ಉಡುಪಿ

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನ್ಯಾಯ ಕೇಳಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಸೋಗಿನಲ್ಲಿ ಬಂದವರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆರೋಪಿಸಿದರು.

ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ. ಆದರೆ ಅವರನ್ನು ಬಂಧಿಸುವ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಯುವಜನರನ್ನು ಬಳಸಿಕೊಂಡು ಸುಳ್ಳು ಅಪಪ್ರಚಾರ ನಡೆಸಿ ಯುಪಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ, ಈಗ ಅದೇ ಯುವಜನತೆ ಪ್ರಶ್ನೆ ಕೇಳಲು ಮುಂದಾದಾಗ ವಿದ್ಯಾರ್ಥಿಗಳನ್ನೇ ದೇಶದ್ರೋಹಿಗಳಂತೆ ಬಿಂಬಿಸುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.

ಕಳೆದ 12 ವರ್ಷಗಳಲ್ಲಿ ನೂರಾರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಕೇಂದ್ರ ಸರಕಾರದಿಂದ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರಧಾನಿ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

Leave a Reply