Featured

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ – Vishwanews24

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ

ಉಡುಪಿ , : ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ ಇದ್ದು ಅವರು ತನ್ನ ಮಕ್ಕಳಾಟಿಕೆ ಸ್ವಭಾವವನ್ನು ಕೈಬಿಟ್ಟು ಉಡುಪಿ ಕ್ಷೇತ್ರದ ಜನರು ತನಗೆ ಮತ ನೀಡಿರುವುದು ಕ್ಷೇತ್ರದ ಅಭಿವೃದ್ಧಿ ಮಾಡಲು ಎನ್ನುವುದುನ್ನು ಅರಿತು ಅದರ ಕಡೆಗೆ ಗಮನ ಹರಿಸುವುದು ಉತ್ತಮ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ‌ಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸಲಹೆ ನೀಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ ಆದರೆ ಪ್ರತಿಭಟನೆಯ ಹೆಸರಿನಲ್ಲಿ ಪ್ರಚೋದನೆಗೆ ಅವಕಾಶ ನೀಡುವುದು ತಪ್ಪು. ಹಿರಿಯ ಸಾಮಾಜಿಕ ಕಾರ್ಯಕರ್ತರಾದ ಎಂ.ಜಿ ಹೆಗ್ಡೆ ಅವರ ಹೇಳಿಕೆಯನ್ನು ಪ್ರತಿಭಟಿಸುವ ಭರದಲ್ಲಿ ಅವರ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯವಾದುದು ಎಂದು ಟೀಕಿಸಿದ್ದಾರೆ.

ಪ್ರತಿಯೊಬ್ಬರ ವಿಚಾರಧಾರೆಗಳು ಒಂದೇ ಆಗಿರಬೇಕು ಎನ್ನುವ ಮನಸ್ಥಿತಿ ಸರಿಯಲ್ಲ. ಇದು ಸಮಾಜಕ್ಕೆ ಮಾರಕವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.ಶಾಸಕರು ತನ್ನ ಕ್ಷೇತ್ರದ ಪ್ರತಿಯೊಂದು ಧರ್ಮ, ಜಾತಿಯ ಜನರನ್ನು ಒಂದಾಗಿ ಕೊಂಡೊಯ್ಯುವ ಜವಾಬ್ದಾರಿಯನ್ನು ಹೊಂದಿದ್ದು ಎಂದಿಗೂ ಕೂಡ ಅವರ ವರ್ತನೆ ಬೇಲಿಯೇ ಎದ್ದು ಹೊಲ ಮೇಯುವ ರೀತಿ ಆಗಬಾರದು ಎನ್ನುವ ಕನಿಷ್ಠ ಜ್ಞಾನ ಅವರಿಗೆ ಇರಬೇಕು. ನಾಯಕನಾದವನು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಬೇಕು, ಸಮಾಜಕ್ಕೆ ಮಾದರಿಯಾಗಬೇಕೇ ವಿನಃ ಅವರೇ ಪ್ರಚೋದನೆಗೆ ಅವಕಾಶ ನೀಡಿದರೆ ಇದರಿಂದ ಮುಂದೆ ನಮ್ಮ ಸಮಾಜದ ಯುವಜನತೆಯು ಹಿಂಸಾತ್ಮಕ ಹಾದಿಯನ್ನು ಹಿಡಿಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.

ತಾನೊಬ್ಬ ಜವಾಬ್ದಾರಿಯುತ ಶಾಸಕ ಎನ್ನುವುದನ್ನು ಅರಿತು ಯಾವತ್ತೂ ಕೂಡ ಕೀಳು ಮಟ್ಟದ ವರ್ತನೆ ತೋರಲು ಹೋಗುವುದು ಸಮಾಜಕ್ಕೆ ಅಪಾಯಕಾರಿಯಾಗಿ ಪರಿಣಮಿಸಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಲಿ ಎನ್ನುವುದು ಜನತೆಯ ಆಶಯವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago