Featured

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ – Vishwanews24

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ

ಉಡುಪಿ , : ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ ಇದ್ದು ಅವರು ತನ್ನ ಮಕ್ಕಳಾಟಿಕೆ ಸ್ವಭಾವವನ್ನು ಕೈಬಿಟ್ಟು ಉಡುಪಿ ಕ್ಷೇತ್ರದ ಜನರು ತನಗೆ ಮತ ನೀಡಿರುವುದು ಕ್ಷೇತ್ರದ ಅಭಿವೃದ್ಧಿ ಮಾಡಲು ಎನ್ನುವುದುನ್ನು ಅರಿತು ಅದರ ಕಡೆಗೆ ಗಮನ ಹರಿಸುವುದು ಉತ್ತಮ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ‌ಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸಲಹೆ ನೀಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ ಆದರೆ ಪ್ರತಿಭಟನೆಯ ಹೆಸರಿನಲ್ಲಿ ಪ್ರಚೋದನೆಗೆ ಅವಕಾಶ ನೀಡುವುದು ತಪ್ಪು. ಹಿರಿಯ ಸಾಮಾಜಿಕ ಕಾರ್ಯಕರ್ತರಾದ ಎಂ.ಜಿ ಹೆಗ್ಡೆ ಅವರ ಹೇಳಿಕೆಯನ್ನು ಪ್ರತಿಭಟಿಸುವ ಭರದಲ್ಲಿ ಅವರ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯವಾದುದು ಎಂದು ಟೀಕಿಸಿದ್ದಾರೆ.

ಪ್ರತಿಯೊಬ್ಬರ ವಿಚಾರಧಾರೆಗಳು ಒಂದೇ ಆಗಿರಬೇಕು ಎನ್ನುವ ಮನಸ್ಥಿತಿ ಸರಿಯಲ್ಲ. ಇದು ಸಮಾಜಕ್ಕೆ ಮಾರಕವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.ಶಾಸಕರು ತನ್ನ ಕ್ಷೇತ್ರದ ಪ್ರತಿಯೊಂದು ಧರ್ಮ, ಜಾತಿಯ ಜನರನ್ನು ಒಂದಾಗಿ ಕೊಂಡೊಯ್ಯುವ ಜವಾಬ್ದಾರಿಯನ್ನು ಹೊಂದಿದ್ದು ಎಂದಿಗೂ ಕೂಡ ಅವರ ವರ್ತನೆ ಬೇಲಿಯೇ ಎದ್ದು ಹೊಲ ಮೇಯುವ ರೀತಿ ಆಗಬಾರದು ಎನ್ನುವ ಕನಿಷ್ಠ ಜ್ಞಾನ ಅವರಿಗೆ ಇರಬೇಕು. ನಾಯಕನಾದವನು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಬೇಕು, ಸಮಾಜಕ್ಕೆ ಮಾದರಿಯಾಗಬೇಕೇ ವಿನಃ ಅವರೇ ಪ್ರಚೋದನೆಗೆ ಅವಕಾಶ ನೀಡಿದರೆ ಇದರಿಂದ ಮುಂದೆ ನಮ್ಮ ಸಮಾಜದ ಯುವಜನತೆಯು ಹಿಂಸಾತ್ಮಕ ಹಾದಿಯನ್ನು ಹಿಡಿಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.

ತಾನೊಬ್ಬ ಜವಾಬ್ದಾರಿಯುತ ಶಾಸಕ ಎನ್ನುವುದನ್ನು ಅರಿತು ಯಾವತ್ತೂ ಕೂಡ ಕೀಳು ಮಟ್ಟದ ವರ್ತನೆ ತೋರಲು ಹೋಗುವುದು ಸಮಾಜಕ್ಕೆ ಅಪಾಯಕಾರಿಯಾಗಿ ಪರಿಣಮಿಸಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಲಿ ಎನ್ನುವುದು ಜನತೆಯ ಆಶಯವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago