Featured

ಉಡುಪಿ: ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ದಾಖಲು ಖಂಡನೀಯ : ಸುನಿಲ್ ಕುಮಾರ್ – vishwanews24

ಉಡುಪಿ: ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ದಾಖಲು ಖಂಡನೀಯ : ಸುನಿಲ್ ಕುಮಾರ್

ಉಡುಪಿ: ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಜನರ ಮೇಲೆ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕೃತ್ಯ.

ಪುಜಾಪ್ರಭುತ್ವದ ಮೌಲ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದುವರೆಗೆ ಆಡಿದ ಮಾತುಗಳೆಲ್ಲವೂ ಕೇವಲ ತೋರಿಕೆ. ಈ ಎಲ್ಲ ಮಾತುಗಳು ಪ್ರತಿಪಕ್ಷದಲ್ಲಿ ಇದ್ದಾಗ ಮಾತ್ರ ಅವರಿಗೆ ಸುಲಭವಾಗಿ ಲಭಿಸುವ ಭಾಷಣದ ಸರಕೆಂಬುದು ಈಗ ದೃಢಪಟ್ಟಿದೆ. ಅಧಿಕಾರದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಒಂದು ಪ್ರತಿಭಟನೆಯನ್ನೂ ಸಹಿಸಲಾಗದಂಥ ನಿರಂಕುಶ ಮನಃಸ್ಥಿತಿ ಆವರಿಸುತ್ತದೆ ಎಂಬುದಕ್ಕೆ ಈ ಘಟನೆಯೊಂದು ಉದಾಹರಣೆಯಾಗಿದೆ.

ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ಸರ್ಕಾರ ವಾಪಾಸ್‌ ತೆಗೆದುಕೊಂಡಿತ್ತು.ಇದರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದರಲ್ಲಿ ಭಾಗಿಯಾದ ಹನ್ನೊಂದು ಜನರ ಮೇಲೆ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚಿಸಿದೆ.ನಿಮ್ಮ ಸರ್ಕಾರ ಪ್ರತಿಭಟನೆ ನಡೆಸುವುದನ್ನೂ ಸಹಿಸದಷ್ಟು ಪುಜಾಪುಭುತ್ವ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ವಿಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ದ್ವೇಷರಾಜಕಾರಣ ನಡೆಸಲಾಗುತ್ತಿತ್ತು. ಅದು ಈಗ ಮತ್ತೊಂದು ಮಜಲು ತಲುಪಿದೆ. ಈಗ ಹೋರಾಟಗಾರರನ್ನೂ ದಮನಿಸುವುದಕ್ಕೆ ಈ ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತವಲ್ಲ, ದೌರ್ಜನ್ಯಕ್ಕೆ ಜನ ಬೆದರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಸಾಕ್ಷಿ ನಾಶ ಸುಲಭವಲ್ಲ ಎಂಬುದು ನೆನಪಿರಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

20 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago