ಉಡುಪಿ : ಹಿಜಾಬ್ ಧರಿಸದೇ ಪರೀಕ್ಷೆ ಬರೆಯುವುದಿಲ್ಲ ಎಂದು ಪಟ್ಟು ಹಿಡಿದಿರುವ ಉಡುಪಿ ಜಿಲ್ಲೆಯ 40 ಮಂದಿ ವಿದ್ಯಾರ್ಥಿನಿಯರು ಮಂಗಳವಾರದಿಂದ ಆರಂಭಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.
ಹಿಜಾಬ್ ನ್ನು ಶಿಕ್ಷಣ ಸಂಸ್ಥೆಗಳಲ್ಲಿ ಧರಿಸುವಂತಿಲ್ಲ ಎಂಬುದಾಗಿ ಉಚ್ಚ ನ್ಯಾಯಾಲಯವು ಆದೇಶ ನೀಡಿದೆ. ಅದರ ಹೊರತಾಗಿಯೂ ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುವುದಾಗಿ ಈ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದರು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅದಕ್ಕೆ ಕಾಲೇಜಿನಲ್ಲಿ ಅವಕಾಶ ನಿರಾಕರಿಸಲಾಯಿತು. ಹೀಗಾಗಿ ಜಿಲ್ಲೆಯಲ್ಲಿ 40 ಮಂದಿ ವಿದ್ಯಾರ್ಥಿನಿಯರು ಮೊದಲ ದಿನದ ಪರೀಕ್ಷೆಗೆ ಗೈರಾಗಿದ್ದಾರೆ.
ಕುಂದಾಪುರದಲ್ಲಿ 24, ಬೈಂದೂರಿನಲ್ಲಿ 14 ಮತ್ತು ಉಡುಪಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿಲ್ಲ. ಕುಂದಾಪುರ ಸರ್ಕಾರಿ ಪಪೂ ಕಾಲೇಜಿನ ಪ್ರಥಮ ಪಿಯುಸಿಯಲ್ಲಿ ಒಟ್ಟು 14 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಈ ಪೈಕಿ ಆರು ಮಂದಿ ಹಾಜರಾಗಿದ್ದಾರೆ. ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ 28 ಮಂದಿ ಪೈಕಿ 15 ಮಂದಿ ಪರೀಕ್ಷೆ ಬರೆಯಲಿಲ್ಲ. ಇವರಲ್ಲಿ 9 ಮಂದಿ ಹಿಜಾಬ್ ಧರಿಸಿ ಬಂದು ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪ್ರಾಂಶುಪಾಲರಲ್ಲಿ ಕೇಳಿದಾಗ, ಪ್ರಾಂಶುಪಾಲರು ಇದಕ್ಕೆ ನಿರಾಕರಿಸಿದರು. ಹೀಗಾಗಿ ವಾಪಾಸ್ ಮನೆಗೆ ತೆರಳಿದರು. 13 ಮಂದಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
ಭಂಡಾರ್ಕಾರ್ಸ್ ಕಾಲೇಜಿನ ಐವರಲ್ಲಿ ನಾಲ್ವರು, ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ 8 ಮಂದಿಯಲ್ಲಿ ಇಬ್ಬರು, ಬೈಂದೂರು ಸರಕಾರಿ ಪ.ಪೂ. ಕಾಲೇಜಿನ 10 ಮಂದಿಯಲ್ಲಿ ಇಬ್ಬರು ಹಾಜರಾಗಿದ್ದಾರೆ. ಬಸ್ರೂರು ಶಾರದಾ ಕಾಲೇಜು ಹಾಗೂ ಗಂಗೊಳ್ಳಿಯ ಎಸ್ವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…