Featured

ಉಡುಪಿ:  ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ ) : ಅರ್ಜಿ ಆಹ್ವಾನ – vishwanews24

ಉಡುಪಿ:  ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಅರ್ಜಿ ಆಹ್ವಾನ

    ಉಡುಪಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ..ಜಿ.ಪಿ) ಯಡಿ ಜಿಲ್ಲೆಯಲ್ಲಿ ಸ್ವಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ

  ಯೋಜನೆಯಡಿ ನಿರುದ್ಯೋಗಿ ಯುವಕ ಹಾಗೂ ಯುವತಿಯರು ಗರಿಷ್ಠ ಯೋಜನಾ ವೆಚ್ಚ ರೂ. 50 ಲಕ್ಷ ರೂ. ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20 ಲಕ್ಷ ರೂ. ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, ಯೋಜನಾ ವೆಚ್ಚದ ಶೇ.90 ರಿಂದ 95 ರಷ್ಟು ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳಿಗೆ ಶಿಫಾರಸ್ಸು ಮಾಡಲಾಗುವುದು. ಯೋಜನಾ ವೆಚ್ಚದ ಮೇಲೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು

 ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಉತ್ಪಾದನಾ ಘಟಕವಾಗಿದ್ದಲ್ಲಿ 10 ಲಕ್ಷ ರೂ. ಮತ್ತು ಸೇವಾ ಘಟಕವಾಗಿದ್ದಲ್ಲಿ 5 ಲಕ್ಷ ರೂ. ಗಳಿಗಿಂತ ಮೇಲ್ಪಟ್ಟ ಯೋಜನಾ ವೆಚ್ಚಗಳನ್ನೊಳಗೊಂಡ ಘಟಕಗಳನ್ನು ಸ್ಥಾಪಿಸುವವರು ಕನಿಷ್ಠ 8ನೇ ತರಗತಿ ಉತ್ತೀರ್ಣವಾಗಿರಬೇಕು

 ನಿರುದ್ಯೋಗಿ ಯುವಕ ಹಾಗೂ ಯುವತಿಯರು ವೆಬ್ಸೈಟ್  https://www.kviconline.gov.in/pmegpeportal/jsp/pmegponline.jsp ಮೂಲಕ ಅರ್ಜಿಯನ್ನು ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ತಪ್ಪದೇ ಅಪ್ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬAಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣೀಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885, 080-25665883 ಹಾಗೂ ಪ್ರಾದೇಶಿಕ ಕಚೇರಿ, ಕಾಯರ್ ಬೋರ್ಡ್, ಪೀಣ್ಯಾ ಕೈಗಾರಿಕಾ ಪ್ರದೇಶ, ಬೆಂಗಳೂರು ದೂ.ಸಂಖ್ಯೆ: 080-28375023  ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36-ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago