Featured

ಉಡುಪಿ : ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ – Vishwnaews24

ಉಡುಪಿ : ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ – Vishwnaews24

ಉಡುಪಿ, :ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿನ್ನಿರು/ ಲವಣ/ ಕ್ಷಾರೀಯ ಪ್ರದೇಶಗಳಲ್ಲಿ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಸಿಹಿನೀರಿನ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಕಡಲ ಮೀನುಗಳ ಸಣ್ಣ ಹ್ಯಾಚರಿ ಕೇಂದ್ರಗಳ ಸ್ಥಾಪನೆ, ಕಡಲ ಕಳೆ ಕೃಷಿಗೆ ರ‍್ಯಾಫ್ಟ್ ಪದ್ದತಿ, ಮೊನೊಲಿನ್/ಟ್ಯೂಬೆನೆಟ್ ಪದ್ಧತಿ ವಿಧಾನದೊಂದಿಗೆ ಕಡಲಕಳೆ ಕೃಷಿ ಸ್ಥಾಪನೆ, ಬ್ಯಾಕ್ ಯಾರ್ಡ ಅಲಂಕಾರಿಕ ಮೀನು ಸಾಕಾಣಿಕೆ ಘಟಕ, ಮಧ್ಯಮ ಪ್ರಮಾಣದ ಅಲಂಕಾರಿಕ ಮೀನು ಸಾಕಾಣಿಕ ಘಟಕ, ಮಧ್ಯಮ ಆರ್.ಎ.ಎಸ್ ಘಟಕ ಸ್ಥಾಪನೆ, ಸಣ್ಣ ಆರ್.ಎ.ಎಸ್ ಘಟಕ, ಹಿತ್ತಲಿನ ಮಿನಿ ಆರ್.ಎ.ಎಸ್ ಘಟಕಗಳ ಸ್ಥಾಪನೆ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ಆಧುನೀಕರಣ, ಐಸ್ ಪೆಟ್ಟಿಗೆಗಳೊಂದಿಗೆ ಸೈಕಲ್, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ, ರಫ್ತು ಸಾಮರ್ಥ್ಯಕ್ಕಾಗಿ ಅಸ್ತಿತ್ವದಲ್ಲಿರುವ ಮೀನುಗಾರಿಕಾ ದೋಣಿಗಳ ಉನ್ನತೀಕರಣ, ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಲ್ಲಿ ಜೈವಿಕ ಶೌಚಾಲಯಗಳ ಸ್ಥಾಪನೆ, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ದೋಣಿಗಳಿಗೆ ಸಂವಹನ ಮತ್ತು ಟ್ರಾಕಿಂಗ್ ಸಾಧನಗಳು, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ (ಬದಲಿ) ಮತ್ತು ಬಲೆ ಒದಗಿಸುವುದು ಹಾಗೂ ನೀಲಿಕ್ರಾಂತಿ ಯೋಜನೆಯಡಿ 10 ಮೀ ಉದ್ದದ ಎಫ್.ಆರ್.ಪಿ ದೋಣಿ ಶಾಖ ನಿರೋಧಕ ಐಸ್ ಮತ್ತು ಮೀನು ಪೆಟ್ಟಿಗೆ ಮತ್ತು ಕಡಲಕಳೆ ಕೃಷಿ ಘಟಕಗಳಿಗೆ ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

2 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

6 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

18 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

43 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

49 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago