ಉಡುಪಿ, :ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿನ್ನಿರು/ ಲವಣ/ ಕ್ಷಾರೀಯ ಪ್ರದೇಶಗಳಲ್ಲಿ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಸಿಹಿನೀರಿನ ಬಯೋಫ್ಲಾಕ್ ಕೊಳಗಳ ನಿರ್ಮಾಣ, ಕಡಲ ಮೀನುಗಳ ಸಣ್ಣ ಹ್ಯಾಚರಿ ಕೇಂದ್ರಗಳ ಸ್ಥಾಪನೆ, ಕಡಲ ಕಳೆ ಕೃಷಿಗೆ ರ್ಯಾಫ್ಟ್ ಪದ್ದತಿ, ಮೊನೊಲಿನ್/ಟ್ಯೂಬೆನೆಟ್ ಪದ್ಧತಿ ವಿಧಾನದೊಂದಿಗೆ ಕಡಲಕಳೆ ಕೃಷಿ ಸ್ಥಾಪನೆ, ಬ್ಯಾಕ್ ಯಾರ್ಡ ಅಲಂಕಾರಿಕ ಮೀನು ಸಾಕಾಣಿಕೆ ಘಟಕ, ಮಧ್ಯಮ ಪ್ರಮಾಣದ ಅಲಂಕಾರಿಕ ಮೀನು ಸಾಕಾಣಿಕ ಘಟಕ, ಮಧ್ಯಮ ಆರ್.ಎ.ಎಸ್ ಘಟಕ ಸ್ಥಾಪನೆ, ಸಣ್ಣ ಆರ್.ಎ.ಎಸ್ ಘಟಕ, ಹಿತ್ತಲಿನ ಮಿನಿ ಆರ್.ಎ.ಎಸ್ ಘಟಕಗಳ ಸ್ಥಾಪನೆ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರಗಳ ಆಧುನೀಕರಣ, ಐಸ್ ಪೆಟ್ಟಿಗೆಗಳೊಂದಿಗೆ ಸೈಕಲ್, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ, ರಫ್ತು ಸಾಮರ್ಥ್ಯಕ್ಕಾಗಿ ಅಸ್ತಿತ್ವದಲ್ಲಿರುವ ಮೀನುಗಾರಿಕಾ ದೋಣಿಗಳ ಉನ್ನತೀಕರಣ, ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಲ್ಲಿ ಜೈವಿಕ ಶೌಚಾಲಯಗಳ ಸ್ಥಾಪನೆ, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ದೋಣಿಗಳಿಗೆ ಸಂವಹನ ಮತ್ತು ಟ್ರಾಕಿಂಗ್ ಸಾಧನಗಳು, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ (ಬದಲಿ) ಮತ್ತು ಬಲೆ ಒದಗಿಸುವುದು ಹಾಗೂ ನೀಲಿಕ್ರಾಂತಿ ಯೋಜನೆಯಡಿ 10 ಮೀ ಉದ್ದದ ಎಫ್.ಆರ್.ಪಿ ದೋಣಿ ಶಾಖ ನಿರೋಧಕ ಐಸ್ ಮತ್ತು ಮೀನು ಪೆಟ್ಟಿಗೆ ಮತ್ತು ಕಡಲಕಳೆ ಕೃಷಿ ಘಟಕಗಳಿಗೆ ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…