Featured

ಉಡುಪಿ: ಪ್ರಧಾನಿಯವರು ರಾಜದಂಡವನ್ನು ಸಂಸತ್ತಿನಲ್ಲಿ ಇಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ : ತಿಂಗಳೆ ವಿಕ್ರಮಾರ್ಜುನ ಹೆಗ್ಡೆ – Vishwanews24

ಉಡುಪಿ: ಪ್ರಧಾನಿಯವರು ರಾಜದಂಡವನ್ನು ಸಂಸತ್ತಿನಲ್ಲಿ ಇಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ : ತಿಂಗಳೆ ವಿಕ್ರಮಾರ್ಜುನ ಹೆಗ್ಡೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡವನ್ನು ಸಂಸತ್ತಿನಲ್ಲಿ ಇಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮುಂದಿನ ಬಾರಿ ಪ್ರಧಾನಿ ಅವರು ಪ್ರಮಾಣ ವಚನ ಸ್ವೀಕರಿಸುವ ಮೊದಲು ರಾಜದಂಡವನ್ನು ಸ್ವೀಕರಿಸಿ, ಬಳಿಕ ಪ್ರಮಾಣವಚನ ಸ್ವೀಕರಿಸಬೇಕು. ಇದರಿಂದ ರಾಜದಂಡದ ಗೌರವ ಹೆಚ್ಚುತ್ತದೆ. ಹಿಂದಿನ ಸಂಪ್ರದಾಯಗಳು ಮರುಕಳಿಸುತ್ತವೆ ಎಂದು ಬಿಜೆಪಿ ಮುಖಂಡ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ರಾಜರ ಪಟ್ಟಾಭಿಷೇಕ ನಡೆಯುವಾಗ ರಾಜದಂಡ ನೀಡುವ ಸಂಪ್ರದಾಯ ಇತ್ತು. ಈಗ ಕುಟುಂಬ, ಗ್ರಾಮಕ್ಕೆ ಸಂಪ್ರದಾಯ ಸೀಮಿತಗೊಂಡಿದೆ. ಅರ್ಧದಲ್ಲಿ ನಿಂತಿದ್ದ ನಮ್ಮ ಮನೆತನದ ಸಂಪ್ರದಾಯವನ್ನು ದೈವಗಳ ಬೇಡಿಕೆ, ಕುಟುಂಬದ ಒಪ್ಪಿಗೆಯಂತೆ ನಾನು ರಾಜದಂಡ ಸ್ವೀಕರಿಸಿದ್ದೇನೆ. ಹಿಂದೆ ರಾಜರು ನ್ಯಾಯ ತೀರ್ಮಾನ ಮಾಡುವಾಗ, ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ರಾಜದಂಡ ಹಿಡಿಯುತ್ತಿದ್ದರು. ಆದರೆ ಈಗ ಅದು ವಿಜಯದಶಮಿ, ದೈವದ ಬಲಿ ನಡೆಯುವ ಸಂದರ್ಭದಲ್ಲಿ ಮಾತ್ರ ಹಿಡಿಯಲಾಗುತ್ತದೆ ಎಂದರು.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

16 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

1 hour ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago