ಉಡುಪಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರನ್ನು ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗೂ ಅಪ್ರಬುದ್ಧ ಬಾಲಿಶ ರಾಜಕಾರಣಿ ಹಾಗೂ ಚುನಾವಣೆಯಲ್ಲಿ ಸೋತ ವ್ಯಕ್ತಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೆಪಿಸಿಸಿ ಕೊ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಹೇಳಿದ್ದಾರೆ.
ಕುಯಿಲಾಡಿ ಅವರು ಎರಡು ಬಾರಿ ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿ ಸೋತವರು, ನಯನಾ ಗಣೇಶ್ ಅವರೂ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸಿ ಸೋತವರು. ಅಷ್ಟೇ ಏಕೆ ಇಂಧನ ಸಚಿವರಾಗಿ ಭಾರೀ ಅಭಿವೃದ್ಧಿ ಮಾಡಿದ್ದರು ಎಂದು ಇದೇ ಬಿಜೆಪಿ ನಾಯಕರು ಕೊಚ್ಚಿಕೊಳ್ಳುವ ಶೋಭಾ ಕರಂದ್ಲಾಜೆ ಅವರೂ ಕೆಜೆಪಿಯಿಂದ ಸ್ಪರ್ಧಿಸಿ ಸೋತವರೇ. ಹಾಗಾಗಿ ಯುವ ನಾಯಕ ಮಿಥುನ್ ರೈ ಅವರನ್ನು ಸೋತವರು ಎಂದು ಹೀಯಾಳಿಸುವುದು ಬಿಜೆಪಿ ನಾಯಕರು ಮೇಲೆ ನೋಡಿ ಉಗಿದಂತೆ ಆಗಿದೆ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಗೋದಾನ, ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕ ಸೇವೆ, ಪಿಲಿನಲಿಕೆ ಇತ್ಯಾದಿಗಳ ಮೂಲಕ ಮಿಥುನ್ ರೈ ಅವರು ಸಂಸ್ಕೃತಿ-ಸಂಸ್ಕಾರದ ರಕ್ಷಣೆಗೆ ನೀಡುತ್ತಿರುವ ಕೊಡುಗೆ ಅನನ್ಯ. ಮಿಥುನ್ ರೈ ಬಾಲಿಷ ನಾಯಕರಾದರೆ ಶೋಭಾ ವಿರುದ್ಧ ಅವರ ಒಂದೇ ಒಂದು ಹೇಳಿಕೆಗೆ ಮಂಡಲ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಬಿಜೆಪಿ ನಾಯಕರು ಪ್ರತಿ ಹೇಳಿಕೆ ನೀಡುತ್ತಿದ್ದಾರೆಂದರೆ, ಮಿಥುನ್ ಅವರ ವ್ಯಕ್ತಿತ್ವಕ್ಕೆ ಬಿಜೆಪಿಯವರು ಎಷ್ಟು ಮಹತ್ವ ನೀಡುತ್ತಾರೆಂದು ತಿಳಿಯುತ್ತದೆ. ಪ್ರತಿಪಕ್ಷದವರನ್ನು ಹಳಿಯುವ ಪ್ರಯತ್ನ ಬಿಟ್ಟು ಇನ್ನಾದರೂ ಸಂಸದೆ ಶೋಭಾ ಅಭಿವೃದ್ಧಿ ಕೆಲಸಗಳ ಮೂಲಕ ಮೋದಿ ಮುಖ ನೋಡಿ ಮತ ನೀಡಿದ ಜನರಿಗೆ ನ್ಯಾಯ ಒದಗಿಸಲಿ ಎಂದು ಹರೀಶ್ ಕಿಣಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕಾರ್ಕಳ: ಅಪಾಯಕಾರಿ ಹೊಂಡ ತಪ್ಪಿಸಲು ಹೋದ ಕಾರಿಗೆ ಇನ್ನೊಂದು ಕಾರು ಡಿಕ್ಕಿ – ಎರಡೂ ಕಾರುಗಳು ಜಖಂ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…