Featured

ಉಡುಪಿ: ಪ್ರಧಾನಿ ಮೋದಿ ಮುಖ‌ ನೋಡಿ ಮತ ನೀಡಿದ ಜನರಿಗೆ ಸಂಸದೆ ಶೋಭಾ ನ್ಯಾಯ ಒದಗಿಸಲಿ : ಹರೀಶ್ ಕಿಣಿ – Vishwanews24

ಉಡುಪಿ: ಪ್ರಧಾನಿ ಮೋದಿ ಮುಖ‌ ನೋಡಿ ಮತ ನೀಡಿದ ಜನರಿಗೆ ಸಂಸದೆ ಶೋಭಾ ನ್ಯಾಯ ಒದಗಿಸಲಿ : ಹರೀಶ್ ಕಿಣಿ

ಉಡುಪಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರನ್ನು ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗೂ ಅಪ್ರಬುದ್ಧ ಬಾಲಿಶ ರಾಜಕಾರಣಿ ಹಾಗೂ ಚುನಾವಣೆಯಲ್ಲಿ ಸೋತ ವ್ಯಕ್ತಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೆಪಿಸಿಸಿ ಕೊ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಹೇಳಿದ್ದಾರೆ.

ಕುಯಿಲಾಡಿ ಅವರು ಎರಡು ಬಾರಿ ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿ ಸೋತವರು, ನಯನಾ ಗಣೇಶ್ ಅವರೂ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸಿ ಸೋತವರು. ಅಷ್ಟೇ ಏಕೆ ಇಂಧನ ಸಚಿವರಾಗಿ ಭಾರೀ ಅಭಿವೃದ್ಧಿ ಮಾಡಿದ್ದರು ಎಂದು ಇದೇ ಬಿಜೆಪಿ ನಾಯಕರು ಕೊಚ್ಚಿಕೊಳ್ಳುವ ಶೋಭಾ ಕರಂದ್ಲಾಜೆ ಅವರೂ ಕೆಜೆಪಿಯಿಂದ ಸ್ಪರ್ಧಿಸಿ ಸೋತವರೇ. ಹಾಗಾಗಿ ಯುವ ನಾಯಕ ಮಿಥುನ್ ರೈ ಅವರನ್ನು ಸೋತವರು ಎಂದು ಹೀಯಾಳಿಸುವುದು ಬಿಜೆಪಿ ನಾಯಕರು ಮೇಲೆ ನೋಡಿ ಉಗಿದಂತೆ ಆಗಿದೆ.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗೋದಾನ, ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕ ಸೇವೆ, ಪಿಲಿನಲಿಕೆ ಇತ್ಯಾದಿಗಳ ಮೂಲಕ ಮಿಥುನ್ ರೈ ಅವರು ಸಂಸ್ಕೃತಿ-ಸಂಸ್ಕಾರದ ರಕ್ಷಣೆಗೆ ನೀಡುತ್ತಿರುವ ಕೊಡುಗೆ ಅನನ್ಯ. ಮಿಥುನ್ ರೈ ಬಾಲಿಷ ನಾಯಕರಾದರೆ ಶೋಭಾ ವಿರುದ್ಧ ಅವರ ಒಂದೇ ಒಂದು ಹೇಳಿಕೆಗೆ ಮಂಡಲ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಬಿಜೆಪಿ ನಾಯಕರು ಪ್ರತಿ ಹೇಳಿಕೆ ನೀಡುತ್ತಿದ್ದಾರೆಂದರೆ, ಮಿಥುನ್ ಅವರ ವ್ಯಕ್ತಿತ್ವಕ್ಕೆ ಬಿಜೆಪಿಯವರು ಎಷ್ಟು ಮಹತ್ವ ನೀಡುತ್ತಾರೆಂದು ತಿಳಿಯುತ್ತದೆ. ಪ್ರತಿಪಕ್ಷದವರನ್ನು ಹಳಿಯುವ ಪ್ರಯತ್ನ ಬಿಟ್ಟು ಇನ್ನಾದರೂ ಸಂಸದೆ ಶೋಭಾ ಅಭಿವೃದ್ಧಿ ಕೆಲಸಗಳ ಮೂಲಕ ಮೋದಿ ಮುಖ‌ ನೋಡಿ ಮತ ನೀಡಿದ ಜನರಿಗೆ ನ್ಯಾಯ ಒದಗಿಸಲಿ ಎಂದು ಹರೀಶ್ ಕಿಣಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾರ್ಕಳ: ಅಪಾಯಕಾರಿ ಹೊಂಡ ತಪ್ಪಿಸಲು ಹೋದ ಕಾರಿಗೆ ಇನ್ನೊಂದು ಕಾರು ಡಿಕ್ಕಿ – ಎರಡೂ ಕಾರುಗಳು ಜಖಂ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago