ಉಡುಪಿ : ಪ್ರಧಾನ ಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ – Vishwanews24

Featured, ಉಡುಪಿ

ಪ್ರಧಾನ ಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ – Vishwanews24

 ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಹಾಗೂ 2021-22 ನೇ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.ksb.gov.in ಅನ್ನು ಸಂಪರ್ಕಿಸುವAತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಹೆಚ್ಚಳ – Vishwanews24

Leave a Reply