Featured

ಉಡುಪಿ: ಪ್ರಮೋದ್‌ ಮಧ್ವರಾಜ್ ಬಿಜೆಪಿ ಸೇರುವುದರ ಬಗ್ಗೆ ನಮ್ಮ ವಿರೋಧವಿಲ್ಲ : ಕುಯಿಲಾಡಿ ಸುರೇಶ್‌ ನಾಯಕ್ – Vishwanews24

ಉಡುಪಿ: ಪ್ರಮೋದ್‌ ಮಧ್ವರಾಜ್ ಬಿಜೆಪಿ ಸೇರಲು ನಮ್ಮ ವಿರೋಧವಿಲ್ಲ : ಕುಯಿಲಾಡಿ ಸುರೇಶ್‌ ನಾಯಕ್ – Vishwanews24

ಉಡುಪಿ: ಕೊನೆಗೂ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿ ಮತ್ತು ಬಿಜೆಪಿ ನಾಯಕರ ಒಳ್ಳೆಯ ವಿಚಾರಗಳನ್ನು ಸ್ವೀಕಾರ ಮಾಡಲು ಪ್ರಾರಂಭಿಸಿರುವುದು ಸಂತೋಷದ ವಿಚಾರ. ಪ್ರಮೋದ್ ಬಿಜೆಪಿ ಸೇರುವುದರ ಬಗ್ಗೆ ನಮ್ಮ ವಿರೋಧವಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಸ್ಪಷ್ಟಪಡಿಸಿದರು.

ಅವರು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಮೋದ್‌ ಮಧ್ವರಾಜ್‌ ಅವರು ಇತ್ತೀಚೆಗೆ ಮೋದಿಯವರನ್ನು ಹೊಗಳಿದ ವಿಚಾರ ತಿಳಿಯಿತು. ಕೊನೆಗೂ ಅವರು ಬಿಜೆಪಿ ಮತ್ತು ಅದರ ನಾಯಕರ ಒಳ್ಳೆಯ ವಿಚಾರಗಳನ್ನು ಸ್ವೀಕಾರ ಮಾಡಿದ್ದಾರೆ. ಅವರು ಬಿಜೆಪಿಗೆ ಬರುವ ವಿಚಾರವನ್ನು ಅವರು ತೀರ್ಮಾನ ಮಾಡಬೇಕು ಆದರೆ ಅವರು ಬರಬೇಕೋ ಬೇಡವೋ ಎನ್ನುವುದರ ಕುರಿತು ನಮ್ಮ ನಾಯಕರು ಮತ್ತು ಕಾರ್ಯಕರ್ತರು ಆಲೋಚನೆ ಮಾಡುತ್ತಾರೆ.

ಬಿಜೆಪಿ ಸೇಪಡೆಯ ಕುರಿತು ಈ ಹಿಂದೆ ಎರಡು ಮೂರು ಬಾರಿ ನಮಗೆ ಕಹಿ ಅನುಭವ ಆಗಿದೆ. ದನ ಬಂದರೆ ಕರು ಬರುತ್ತೆ ಎಂದರು. ನಮಗೆ ಅವರ ಮಾನಸಿಕತೆ ಏನಿದೆ ಎನ್ನುವುದು ತಿಳಿದಿಲ್ಲ. ಅವರು ಬರುವುದಾದರೆ ನಮ್ಮ ಪಕ್ಷದ ಸಿದ್ದಾಂತಗಳನ್ನು ಒಪ್ಪಿಕೊಂಡು ಬಂದರೆ ಸ್ವಾಗತ ಇದೆ. ಆದರೆ ಪ್ರತಿ ಭಾರಿ ಅವರ ಮಾನಸಿಕತೆ ಬದಲಾವಣೆ ಆದರೆ ಅದನ್ನು ನಾವು ಒಪ್ಪಿಕೊಳ್ಳುವುದು ಸಾಧ್ಯವಿಲ್ಲ. ಹಾಗಂತ ಅವರನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಲ್ಲಿನ ಸ್ಥಳೀಯ ಹಂತದ ನಾಯಕರು ಮತ್ತು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ವರಿಷ್ಠರು ಕೂಡ ನಿರ್ಧಾರ ಮಾಡಬೇಕಾಗಿದೆ ಎಂದು ಅವರು ಹೇಳಿದರು.

Vishwa News 24

Recent Posts

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ – vishwanews24

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…

13 hours ago

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ – vishwanews24

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…

13 hours ago

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು – vishwanews24

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…

16 hours ago

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ ದಾಖಲು – vishwanews24

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…

16 hours ago

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ – vishwanews24

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…

16 hours ago

ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಮಾತ್ರ ಸಂಚಾರ – vishwanews24

ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್‌ಎಂಟೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ವಿಸ್ತರಣಾ…

16 hours ago