ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ವರಿಷ್ಠರಿಗೆ ಸಲ್ಲಿಸಲಾಗಿದ್ದು ಇನ್ನು ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು, ಪ್ರಮೋದ್ ಪಕ್ಷ ಸೇರ್ಪಡೆಯಾಗಲು ಯಾವುದೇ ರೀತಿಯ ಹುದ್ದೆಯ ಕಂಡೀಷನ್ ಹಾಕಿಲ್ಲ ಎಂದು ಉಡುಪಿ ಜಿಲ್ಲ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಪಕ್ಷದ ಸಿದ್ದಾಂತವನ್ನು ನಂಬಿ ಬರುವವರಿಗೆ ಪಕ್ಷದ ಗೇಟ್ ಯಾವತ್ತೂ ಮುಚ್ಚಿಲ್ಲ ಆದರೆ ಯಾವುದೇ ಹುದ್ದೆಯ ನಿರೀಕ್ಷೆಯಿಲ್ಲದೆ ಬರುವ ಇಂಗಿತವನ್ನು ಮಾಜಿ ಸಚಿವರು ವ್ಯಕ್ತಪಡಿಸಿದ್ದು ಒಂದು ಹಂತದ ಮಾತುಕತೆ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾ ನಾಯಕರು ಸೇರಿಕೊಂಡು ಮಾಡಿದ್ದು ಅವರನ್ನು ಯಾವಾಗ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು ಎನ್ನುವುದರ ಕುರಿತು ರಾಜ್ಯ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ.
ಪ್ರಮೋದ್ ಪಕ್ಷಕ್ಕೆ ಬರುವ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಇದ್ದರೆ ಅದಕ್ಕೆ ರಾಜ್ಯ ವರಿಷ್ಠರು ಸೂಕ್ತ ವ್ಯವಸ್ಥೆ ಮಾಡಲಿದ್ದಾರೆ. ಒಬ್ಬ ವ್ಯಕ್ತಿ ಪಕ್ಷಕ್ಕೆ ಬರುವ ಸಮಯದಲ್ಲಿ ವಿರೋಧಗಳು ಸಹಜ ಆದರೆ ಬಳಿಕ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಇದು ಬಿಜೆಪಿ ಪಕ್ಷದ ಸಿದ್ದಾಂತವಾಗಿದೆ ಎಂದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…