ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ವರಿಷ್ಠರಿಗೆ ಸಲ್ಲಿಸಲಾಗಿದ್ದು ಇನ್ನು ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು, ಪ್ರಮೋದ್ ಪಕ್ಷ ಸೇರ್ಪಡೆಯಾಗಲು ಯಾವುದೇ ರೀತಿಯ ಹುದ್ದೆಯ ಕಂಡೀಷನ್ ಹಾಕಿಲ್ಲ ಎಂದು ಉಡುಪಿ ಜಿಲ್ಲ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಪಕ್ಷದ ಸಿದ್ದಾಂತವನ್ನು ನಂಬಿ ಬರುವವರಿಗೆ ಪಕ್ಷದ ಗೇಟ್ ಯಾವತ್ತೂ ಮುಚ್ಚಿಲ್ಲ ಆದರೆ ಯಾವುದೇ ಹುದ್ದೆಯ ನಿರೀಕ್ಷೆಯಿಲ್ಲದೆ ಬರುವ ಇಂಗಿತವನ್ನು ಮಾಜಿ ಸಚಿವರು ವ್ಯಕ್ತಪಡಿಸಿದ್ದು ಒಂದು ಹಂತದ ಮಾತುಕತೆ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾ ನಾಯಕರು ಸೇರಿಕೊಂಡು ಮಾಡಿದ್ದು ಅವರನ್ನು ಯಾವಾಗ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು ಎನ್ನುವುದರ ಕುರಿತು ರಾಜ್ಯ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ.
ಪ್ರಮೋದ್ ಪಕ್ಷಕ್ಕೆ ಬರುವ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಇದ್ದರೆ ಅದಕ್ಕೆ ರಾಜ್ಯ ವರಿಷ್ಠರು ಸೂಕ್ತ ವ್ಯವಸ್ಥೆ ಮಾಡಲಿದ್ದಾರೆ. ಒಬ್ಬ ವ್ಯಕ್ತಿ ಪಕ್ಷಕ್ಕೆ ಬರುವ ಸಮಯದಲ್ಲಿ ವಿರೋಧಗಳು ಸಹಜ ಆದರೆ ಬಳಿಕ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಇದು ಬಿಜೆಪಿ ಪಕ್ಷದ ಸಿದ್ದಾಂತವಾಗಿದೆ ಎಂದರು.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…