Featured

ಉಡುಪಿ : ಪ್ರಮೋದ್‌ ಬಿಜೆಪಿ ಸೇರ್ಪಡೆ : ಕಾಂಗ್ರೆಸ್ ಪಕ್ಷ ಇರುವುದು ಕಾರ್ಯಕರ್ತರಿಂದಲೇ ಹೊರತು ನಾಯಕರಿಂದಲ್ಲ : ಹಮ್ಮದ್‌ – Vishwanews24

ಉಡುಪಿ : ಪ್ರಮೋದ್‌ ಬಿಜೆಪಿ ಸೇರ್ಪಡೆ : ಕಾಂಗ್ರೆಸ್ ಪಕ್ಷ ಇರುವುದು ಕಾರ್ಯಕರ್ತರಿಂದಲೇ ಹೊರತು ನಾಯಕರಿಂದಲ್ಲ : ಹಮ್ಮದ್‌

ಉಡುಪಿ: ಕಾಂಗ್ರೆಸ್‌ ಪಕ್ಷ ಸಾಗರದಂತೆ, ಅದರಿಂದ ಒಂದು ಬೊಗಸೆ ನೀರು ತೆಗೆದರೆ ಸಾಗರ ಖಾಲಿಯಾಗುವ ಪ್ರಶ್ನೆಯೇ ಇಲ್ಲ ಹಾಗೆಯೇ ಪಕ್ಷದಲ್ಲಿ ನಾಯಕರಿಗೆ ಕೊರತೆ ಇಲ್ಲ. ಇಂದು ಪಕ್ಷ ಒಬ್ಬ ನಾಯಕನನ್ನು ಕಳೆದುಕೊಂಡಿರಬಹುದು, ಪಕ್ಷ ಕಾರ್ಯಕರ್ತರಿಂದಲೇ ಹೊರತು ನಾಯಕರಿಂದಲ್ಲ ಎಂದು ಉಡುಪಿ ಬ್ಲಾಕ್‌ ಯುವ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷರಾದ ಹಮ್ಮದ್‌ ಉಡುಪಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಪ್ರಮೋದ್ ಮಧ್ವರಾಜ್ ಅವರಿಗೆ ಎಲ್ಲಾ ಸ್ಥಾನಮಾನವನ್ನು ನೀಡಿದ್ದು, ನಿರಂತರವಾಗಿ 2004 ಮತ್ತು 2008 ರ ವಿಧಾನಸಭಾ ಚುನಾವಣೆಯಲ್ಲಿ ಸೋತರೂ, ವಿಧಾನಸಭಾ ಚುನಾವಣೆಯಲ್ಲಿ ಸತತ ನಾಲ್ಕು ಬಾರಿ ಸ್ಪರ್ಧೆ ಮಾಡಲು ಅವಕಾಶಗಳನ್ನು ನೀಡಿದೆ. 2013 ಮಾತ್ರ ಗೆಲುವನ್ನು ಸಾಧಿಸಿದ್ದರು, ಪ್ರಥಮವಾಗಿ ಶಾಸಕರಾಗಿದ್ದ ಇವರನ್ನು ಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಪಕ್ಷ ನೀಡಿದೆ.

ಇಷ್ಟೆಲ್ಲಾ ಅವಕಾಶವನ್ನು ನೀಡಿಯೂ ಪಕ್ಷದ ಬಗ್ಗೆ ಅಗೌರವ ತೋರಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ ಗೊಂಡಿರುವುದು ವೈಯಕ್ತಿಕವಾಗಿ ನನಗೆ ನೋವಾಗಿರಬಹುದು. ಆದರೆ ಕಾರ್ಯಕರ್ತರು ಯಾರೂ ಅವರ ಹಿಂದೆ ಹೋಗಿರುವುದಿಲ್ಲ. ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ, ಕಾರ್ಯಕರ್ತರು ಎದೆಗುಂದುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಬಿಜೆಪಿ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ, ಹಾಗಾಗಿ ಇಂತಹ ಬಿಜೆಪಿಯ ಯಾವುದೇ ಷಡ್ಯಂತ್ರಗಳು ಮುಂದಿನ ಚುನಾವಣೆಯಲ್ಲಿ ಫಲಿಸೋದಿಲ್ಲ. ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago