Featured

ಉಡುಪಿ : ಪ್ರಮೋದ್ ಮಧ್ವರಾಜ್ ಅವರು ಆದಷ್ಟು ಬೇಗ ಪಶ್ಚಾತಾಪ ಪಡಲಿದ್ದಾರೆ : ಡಿಕೆ ಶಿ – Vishwanews24

ನಮ್ಮ ಪಕ್ಷದಲ್ಲಿ ಉಸಿರುಕಟ್ಟುತ್ತಿದೆ ಎಂದವರಿಗೆ ಬಿಜೆಪಿಯಲ್ಲಿ ಸರಿಯಾಗಿ ಉಸಿರಾಡುವಂತಾಗಲಿ..

ಮಧ್ವರಾಜ್ ನನ್ನ ಪಕ್ಕದಲ್ಲಿ ಕುಳಿತುಕೊಳ್ಳುತ್ತಿದ್ದರು ಆದರೆ ಈಗ ಕೆಳಗಡೆ ಕುಳಿತುಕೊಳ್ಳುತ್ತಿದ್ದಾರೆ..

ಮಧ್ವರಾಜ್ ಪಕ್ಷ ತ್ಯಜಿಸಿದರು ಎಂದು ಯಾವುದೇ ಕಾರ್ಯಕರ್ತರು ಕುಗ್ಗಿಲ್ಲ. ಬದಲಾಗಿ ಕಾರ್ಯಕರ್ತರು ಬಹಳ ಉತ್ಸಾಹದಿಂದ ಇದ್ದಾರೆ..

ಕೆಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಇಚ್ಚೆ ವ್ಯಕ್ತಪಡಿಸಿದ್ದಾರೆ..

ಉಡುಪಿ :  ತಮಗೆ ತಮ್ಮ ಪರಿವಾರಕ್ಕೆ ಎಲ್ಲಾ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ದೊಡ್ಡ ತಪ್ಪು ಮಾಡಿದೆ ಎಂದು ಪ್ರಮೋದ್ ಮಧ್ವರಾಜ್ ಅವರು ಆದಷ್ಟು ಬೇಗ ಪಶ್ಚಾತಾಪ ಪಡಲಿದ್ದಾರೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇಂದು ಉಡುಪಿಯ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷ ತ್ಯಜಿಸಿರುವುದು ಅವರು ಸ್ವಇಚ್ಚೆಯಿಂದ ತೆಗೆದುಕೊಂಡಿರುವ ನಿರ್ಧಾರ. ನಮ್ಮ ಪಕ್ಷದಲ್ಲಿ ಉಸಿರುಕಟ್ಟುತ್ತಿದೆ ಎಂದವರಿಗೆ ಬಿಜೆಪಿಯಲ್ಲಿ ಸರಿಯಾಗಿ ಉಸಿರಾಡುವಂತಾಗಲಿ ತುಂಬಾ ಸಂತೋಷ, ಒಳ್ಳೆಯದಾಗಲಿ ಎಂದರು. ಹಾಗೂ ಪ್ರಮೋದ್ ಮಧ್ವರಾಜ್ ನನ್ನ ಪಕ್ಕದಲ್ಲಿ ಕುಳಿತುಕೊಳ್ಳುತ್ತಿದ್ದರು ಆದರೆ ಈಗ ಕೆಳಗಡೆ ಕುಳಿತುಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಅವರು ಪಕ್ಷ ತ್ಯಜಿಸಿದರು ಎಂದು ಯಾವುದೇ ಕಾರ್ಯಕರ್ತರು ಕುಗ್ಗಿಲ್ಲ. ಬದಲಾಗಿ ಕಾರ್ಯಕರ್ತರು ಬಹಳ ಉತ್ಸಾಹದಿಂದ ಇದ್ದಾರೆ. ಕೆಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮೆಂಬರ್ ಶಿಪ್ ನ್ನು ಮತ್ತೆ ಪ್ರಾರಂಭಿಸಲಿದ್ದೇವೆ. ಆದಷ್ಟು ಬೇಗ ತೀರ್ಮಾಣ ಮಾಡಿ ಸದ್ಯದಲ್ಲೇ ಚುನಾವಣೆ ಸ್ಪರ್ಧಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ ಎಂದರು.

ಉದ್ಯೋಗ ಸೃಷ್ಟಿ ಮಾಡುವ ಸಲುವಾಗಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದ ಅವರು, ಉಡುಪಿ, ದ.ಕ ಜಿಲ್ಲೆಯ ಜನರು ಉದ್ಯೋಗ ಸೃಷ್ಟಿ ಮಾಡುವ ಪ್ರಭುದ್ಧತೆ ಹೊಂದಿರುವವರು. ಇಲ್ಲಿಂದ ಉದ್ಯೋಗ ಅರಿಸಿಕೊಂಡು ಬೇರೆಡೆಗೆ ಜನರು ವಲಸೆ ಹೋಗುತ್ತಿರುವುದನ್ನು ತಡೆಗಟ್ಟಬೇಕು. ಯುವಕರು ತಮ್ಮ ಪ್ರತಿಭೆಯನ್ನು ಬಳಸಿಕೊಂಡು ಇಲ್ಲೇ ಉದ್ಯೋಗ ಸೃಷ್ಟಿಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಯು.ಆರ್.ಸಭಾಪತಿ, ಭಾಸ್ಕರ ರಾವ್ ಕಿದಿಯೂರು, ಕುಶಲ ಶೆಟ್ಟಿ, ನರಸಿಂಹ ಮೂರ್ತಿ.ಬಿ, ಅಣ್ಣಯ್ಯ ಸೇರಿಗಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರೋಶನ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

12 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

12 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago