Featured

ಉಡುಪಿ : ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗುವ ಕುರಿತು ಅಧಿಕೃತ ಮಾಹಿತಿ ಇಲ್ಲ : ಶಾಸಕ ರಘುಪತಿ ಭಟ್ – Vishwanews24

ಉಡುಪಿ : ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗುವ ಕುರಿತು ಅಧಿಕೃತ ಮಾಹಿತಿ ಇಲ್ಲ : ಶಾಸಕ ರಘುಪತಿ ಭಟ್

ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗುವ ಕುರಿತು ಅಧಿಕೃತ ಮಾಹಿತಿ ಇಲ್ಲ. ಅವರು ಬಿಜೆಪಿಗೆ ಬರುವುದಕ್ಕೆ ನನ್ನದೇನೂ ಅಭ್ಯಂತರ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು,ಇತ್ತೀಚಿಗೆ ಮುಖ್ಯಮಂತ್ರಿಗಳು ಉಡುಪಿಗೆ ಬಂದಾಗ ಪ್ರಮೋದ್ ಮಧ್ವರಾಜ್ ಅವರು ಸಿಎಂ ಭೇಟಿಯಾಗಿದ್ದರು. ಆಗ ನಾನು ಉಪಹಾರ ಮಾಡುತ್ತಿದ್ದೆ. ಕೈಯಲ್ಲಿ ಯಾವುದೋ ಕವರ್ ಹಿಡಿದುಕೊಂಡಿದ್ದರು. ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಸಮಯ ಕೇಳಿದ್ದರು. ಹಾಗಾಗಿ ಕಂಟ್ರಿ ಇನ್ ಹೋಟೆಲ್ ಗೆ ಬಂದಿದ್ದರು. ಪಕ್ಷ ಸೇರ್ಪಡೆಯ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ ಎಂದರು.

ಅವರು ಪಕ್ಷ ಸೇರ್ಪಡೆ ಆದಲ್ಲಿ ನನಗೆ ಎದುರಾಳಿ ಅಲ್ಲದಿದ್ದರೂ ಪಕ್ಷದ ಎದುರಾಳಿ ಆಗಬಹುದು. ಹೊಸತನ ಕಾಣುವ ಪಕ್ಷದಲ್ಲಿ ಅವರು ಎದುರಾಳಿ ಆಗಬಹುದು. ರಾಜಕೀಯದಲ್ಲಿ ಎದುರಾಳಿ, ಪಕ್ಷದಲ್ಲೂ ಅಥವಾ ಎದುರಲ್ಲಿ ಇರಬಹುದು ಏನೇ ಬಂದರೂ ನಾವು ಮಾನಸಿಕವಾಗಿ ಸಿದ್ದ ಇರಬೇಕು. ಪಕ್ಷ ನಮಗೆ ಅದನ್ನೇ ಹೇಳಿ ಕೊಡುತ್ತದೆ . ಏನೇ ಆದರೂ ಹೋರಾಟ ಮಾಡುವ ಶಕ್ತಿ ಉಳಿಸಿಕೊಳ್ಳಬೇಕು.

ರಾಜಕೀಯ ಪಕ್ಷದಲ್ಲಿ ಕೊನೆಯ ಕ್ಷಣದಲ್ಲಿ ಟಿಕೆಟ್ ಯಾರಿಗೂ ಸಿಗಬಹುದು. ಆಗಲೇ ಸ್ಪರ್ಧೆಯಲ್ಲಿ ಮಜಾ ಬರುತ್ತದೆ ಎಂದು ರಘುಪತಿ ಭಟ್ ಪ್ರತಿಕ್ರಿಯಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago