ಉಡುಪಿ : ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ವಿಷ ಸೇವಿಸಿದ ದಂಪತಿ ; ಸಮಯಪ್ರಜ್ಞೆ ಮೆರೆದ ಬಸ್ ಚಾಲಕ -Vishwanews24

ಕುಂದಾಪುರ: ಕೊಲ್ಲೂರಿನಿಂದ ಮಂಗಳೂರಿಗೆ ಸಾಗುವ ಬಸ್ಸಿನಲ್ಲಿದ್ದ ದಂಪತಿ ಗುರುವಾರ ಮಧ್ಯಾಹ್ನ ಬಸ್ಸಿನಲ್ಲೇ ವಿಷ ಸೇವಿಸಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಅಂಬಲಪಾಡಿ ಬೈಪಾಸ್ ಬಳಿ ಟೆಂಟ್‌ನಲ್ಲಿ ವಾಸ ಮಾಡುತ್ತಿರುವ ತಮಿಳುನಾಡು ಮೂಲದ ವಲಸೆ ಕಾರ್ಮಿಕ ರಾಜಕುಮಾರ್ (35), ಪತ್ನಿ ಸಂಗೀತಾ (28) ವಿಷ ಸೇವಿಸಿದ್ದು ಅವರೊಂದಿಗಿದ್ದ ಒಂದೂವರೆ ವರ್ಷದ ಗಂಡು ಮಗುವಿಗೆ ವಿಷ ಪ್ರಾಶನವಾಗಿದೆಯೇ ಎಂಬುವ ಗುಮಾನಿ ಮೇರೆಗೆ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಕುಮಾರ್ ತಮಿಳಿನಲ್ಲಿ ಡೆತ್ ನೋಟ್ ಬರೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ರಾಜಕುಮಾರ್ ಹಾಗೂ ಸಂಗೀತ ಮಗುವಿನ ಜೊತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದರು. ದೇವರ ದರ್ಶನ ಪಡೆದು, ಅನ್ನ ಪ್ರಸಾದ ಸ್ವೀಕರಿಸಿದ ನಂತರ ಕೊಲ್ಲೂರು ಮಂಗಳೂರು ಬಸ್ ಏರಿದ್ದರು. ಬಸ್ ಏರದ ನಂತರವೋ ಬಸ್ ಏರುವ ಮುನ್ನಾ ವಿಷ ಸೇವಿಸಿದ್ದರ ಎನ್ನೋದು ಸ್ಪಷ್ಟವಾಗಿಲ್ಲ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪತಿ,ಪತ್ನಿ ಸೀಟಿನಲ್ಲಿ ನರಳಾಡುತ್ತಿರುವುದು ನಿರ್ವಾಕ ಗಮನಿಸಿದ್ದಾರೆ. ವಂಡ್ಸೆ ದಾಟಿದ ನಂತರ ವಿಷದ ಪ್ರಭಾವ ಹೆಚ್ಚಾಗಿ ಪತಿ,ಪತ್ನಿ ನರಾಳಾಟ ಹೆಚ್ಚಾಗಿದೆ. ಕಟ್‌ಬೆಲ್ತೂರು ಬಳಿ ಸೀಟಿನಲ್ಲಿ ಒದ್ದಾಡುತ್ತಿದ್ದು ಇಬ್ಬರನ್ನು ನಿರ್ವಾಹಕ ನೋಡಿದ್ದು, ಬಾಯಲ್ಲಿ ನೊರೆ ಬರುವುದ ಕಂಡು ವಿಷ ಸೇವಿಸಿದ್ದಾರೆ ಎಂದು ಗೊತ್ತಾಗಿದೆ. ತಕ್ಷಣ ನಿರ್ವಾಹಕ ಚಾಲಕ್ ಇಕ್ಬಾಲ್ ಗಮನಕ್ಕೆ ತಂದಿದ್ದು, ಅಲ್ಲಿಂದ ಬಸ್ ನೇರ ಕುಂದಾಪುರ ಸರ್ಕಾರಿ ಆಸ್ಪತ್ರೆ ತಂದಿದ್ದಾರೆ. ಬಸ್ಸಿನಲ್ಲಿ ಪತಿ ಪತ್ನಿ ವಿಷ ಕುಡಿದ ಬಗ್ಗೆ ಸಹಾಯವಾಣಿ ತಿಳಿಸಿದ್ದರಿಂದ ಅವರೂ ಆಸ್ಪತ್ರೆ ಬಳಿ ಆಗಮಿಸಿದ್ದು, ತಕ್ಷಣ ಬಸ್ಸಿಂದ ದಂಪತಿ ಇಳಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

 

ಬಸ್ ಚಾಲಕ, ನಿರ್ವಾಹಕನ ಮಾನವೀಯತೆ….
ನಿರ್ವಾಹಕ ತಕ್ಷಣ ಚಾಲಕ ಇಕ್ಬಾಲ್ ಗಮನಕ್ಕೆ ತಂದಿದ್ದಾರೆ. ಚಾಲಕ ಬಸ್ಸನ್ನು ನಿಲ್ಲಿಸದೆ ನೇರ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತಂದಿದ್ದಾರೆ. ತಕ್ಷಣ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.ಬಸ್ ಚಾಲಕ ಇಕ್ಬಾಲ್ ಮತ್ತು ನಿರ್ವಾಹಕ ಸತೀಶ್ ಸಮಯಪ್ರಜ್ಞೆಗೆ ವೈದ್ಯರು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago