ಉಡುಪಿ : ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ವಿಷ ಸೇವಿಸಿದ ದಂಪತಿ ; ಸಮಯಪ್ರಜ್ಞೆ ಮೆರೆದ ಬಸ್ ಚಾಲಕ -Vishwanews24

ಕುಂದಾಪುರ: ಕೊಲ್ಲೂರಿನಿಂದ ಮಂಗಳೂರಿಗೆ ಸಾಗುವ ಬಸ್ಸಿನಲ್ಲಿದ್ದ ದಂಪತಿ ಗುರುವಾರ ಮಧ್ಯಾಹ್ನ ಬಸ್ಸಿನಲ್ಲೇ ವಿಷ ಸೇವಿಸಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಅಂಬಲಪಾಡಿ ಬೈಪಾಸ್ ಬಳಿ ಟೆಂಟ್‌ನಲ್ಲಿ ವಾಸ ಮಾಡುತ್ತಿರುವ ತಮಿಳುನಾಡು ಮೂಲದ ವಲಸೆ ಕಾರ್ಮಿಕ ರಾಜಕುಮಾರ್ (35), ಪತ್ನಿ ಸಂಗೀತಾ (28) ವಿಷ ಸೇವಿಸಿದ್ದು ಅವರೊಂದಿಗಿದ್ದ ಒಂದೂವರೆ ವರ್ಷದ ಗಂಡು ಮಗುವಿಗೆ ವಿಷ ಪ್ರಾಶನವಾಗಿದೆಯೇ ಎಂಬುವ ಗುಮಾನಿ ಮೇರೆಗೆ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಕುಮಾರ್ ತಮಿಳಿನಲ್ಲಿ ಡೆತ್ ನೋಟ್ ಬರೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ರಾಜಕುಮಾರ್ ಹಾಗೂ ಸಂಗೀತ ಮಗುವಿನ ಜೊತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದರು. ದೇವರ ದರ್ಶನ ಪಡೆದು, ಅನ್ನ ಪ್ರಸಾದ ಸ್ವೀಕರಿಸಿದ ನಂತರ ಕೊಲ್ಲೂರು ಮಂಗಳೂರು ಬಸ್ ಏರಿದ್ದರು. ಬಸ್ ಏರದ ನಂತರವೋ ಬಸ್ ಏರುವ ಮುನ್ನಾ ವಿಷ ಸೇವಿಸಿದ್ದರ ಎನ್ನೋದು ಸ್ಪಷ್ಟವಾಗಿಲ್ಲ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪತಿ,ಪತ್ನಿ ಸೀಟಿನಲ್ಲಿ ನರಳಾಡುತ್ತಿರುವುದು ನಿರ್ವಾಕ ಗಮನಿಸಿದ್ದಾರೆ. ವಂಡ್ಸೆ ದಾಟಿದ ನಂತರ ವಿಷದ ಪ್ರಭಾವ ಹೆಚ್ಚಾಗಿ ಪತಿ,ಪತ್ನಿ ನರಾಳಾಟ ಹೆಚ್ಚಾಗಿದೆ. ಕಟ್‌ಬೆಲ್ತೂರು ಬಳಿ ಸೀಟಿನಲ್ಲಿ ಒದ್ದಾಡುತ್ತಿದ್ದು ಇಬ್ಬರನ್ನು ನಿರ್ವಾಹಕ ನೋಡಿದ್ದು, ಬಾಯಲ್ಲಿ ನೊರೆ ಬರುವುದ ಕಂಡು ವಿಷ ಸೇವಿಸಿದ್ದಾರೆ ಎಂದು ಗೊತ್ತಾಗಿದೆ. ತಕ್ಷಣ ನಿರ್ವಾಹಕ ಚಾಲಕ್ ಇಕ್ಬಾಲ್ ಗಮನಕ್ಕೆ ತಂದಿದ್ದು, ಅಲ್ಲಿಂದ ಬಸ್ ನೇರ ಕುಂದಾಪುರ ಸರ್ಕಾರಿ ಆಸ್ಪತ್ರೆ ತಂದಿದ್ದಾರೆ. ಬಸ್ಸಿನಲ್ಲಿ ಪತಿ ಪತ್ನಿ ವಿಷ ಕುಡಿದ ಬಗ್ಗೆ ಸಹಾಯವಾಣಿ ತಿಳಿಸಿದ್ದರಿಂದ ಅವರೂ ಆಸ್ಪತ್ರೆ ಬಳಿ ಆಗಮಿಸಿದ್ದು, ತಕ್ಷಣ ಬಸ್ಸಿಂದ ದಂಪತಿ ಇಳಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

 

ಬಸ್ ಚಾಲಕ, ನಿರ್ವಾಹಕನ ಮಾನವೀಯತೆ….
ನಿರ್ವಾಹಕ ತಕ್ಷಣ ಚಾಲಕ ಇಕ್ಬಾಲ್ ಗಮನಕ್ಕೆ ತಂದಿದ್ದಾರೆ. ಚಾಲಕ ಬಸ್ಸನ್ನು ನಿಲ್ಲಿಸದೆ ನೇರ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತಂದಿದ್ದಾರೆ. ತಕ್ಷಣ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.ಬಸ್ ಚಾಲಕ ಇಕ್ಬಾಲ್ ಮತ್ತು ನಿರ್ವಾಹಕ ಸತೀಶ್ ಸಮಯಪ್ರಜ್ಞೆಗೆ ವೈದ್ಯರು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago