ಉಡುಪಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ಶಾಸಕ ಯತ್ಪಾಲ್ ಸುವರ್ಣ ಕಿಡಿಕಾರಿದ್ದಾರೆ.
ಬನ್ನಂಜೆಯಲ್ಲಿರುವ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಇದ್ದು, ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮೆಸ್ಕಾಂ ತನ್ನ ನಿಯಮ ಪಾಲನೆ ಮಾಡಿತ್ತು. ಪ್ರವಾಸಿ ಮಂದಿರದಲ್ಲಿ ಇಬ್ಬರು ಪ್ರವಾಸಿಗರಿದ್ದು, ಕತ್ತಲೆಯಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಉಂಟಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಶಾಸಕ ಯತ್ಪಾಲ್ ಸುವರ್ಣ, ಪ್ರವಾಸಿ ಮಂದಿರದ ಸಿಬ್ಬಂದಿಯಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಬಳಿಕ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ಪಾಲ್ ಸುವರ್ಣ ಬರೆದುಕೊಂಡಿದ್ದು, ಪಡುಬಿದ್ರೆ ಗ್ರಾಮ ಪಂಚಾಯತ್ ಕಚೇರಿ, ತೆಂಕನಿಡಿಯೂರು ಸರಕಾರಿ ಶಾಲೆಯ ವಿದ್ಯುತ್ ಕಡಿತಗೊಳಿಸಲು ಮೆಸ್ಕಾಂ ಮುಂದಾಗಿದೆ. ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲೂ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲವೆ? ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಇದಕ್ಕಿಂತ ನಿದರ್ಶನ ಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…