ಉಡುಪಿ: ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಅಂದಿನ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ನೌಕರಿ ನೀಡಿದ್ದು ಸರಕಾರ ಬದಲಾದ ಹಿನ್ನಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ ಎಂದು ವಾದಿಸುವ ಬಿಜೆಪಿಗರು ಯಾಕೆ ಅವರ ನೌಕರಿಯನ್ನು ಖಾಯಂ ಮಾಡಿರಲಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಶ್ನಿಸಿದ್ದಾರೆ.
ಸರಕಾರ ಬದಲಾದ ಬೆನ್ನಲ್ಲೇ ಹಿಂದಿನ ಸರಕಾರ ಮಾಡಿರುವ ಎಲ್ಲ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶದಿಂದ ಅನುಕಂಪದ ಆಧಾರದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿಯು ನೌಕರಿ ಕಳೆದುಕೊಂಡಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಅದೇಷ್ಟೋ ಹಿಂದೂ ಯುವಕರ ಕೊಲೆ ನಡೆದಾಗ ಅವರ ಬಗ್ಗೆ ತಲೆ ಕೆಡಿಸದೆ ಕನಿಷ್ಠ ಪರಿಹಾರ ಕೂಡ ನೀಡದೆ ಇರುವ ಬಿಜೆಪಿಗರು ಪ್ರವೀಣ್ ನೆಟ್ಟಾರ್ ಪತ್ನಿಗೆ ತಾತ್ಕಲಿಕ ನೆಲೆಯಲ್ಲಿ ಉದ್ಯೋಗ ನೀಡಿ ಕೈ ತೊಳೆದುಕೊಂಡಿದ್ದಾರೆ. ಇದರಿಂದ ಪ್ರವೀಣ್ ನೆಟ್ಟಾರ್ ಬಗ್ಗೆ ಇರುವ ಬಿಜೆಪಿಯ ಕಾಳಜಿಯ ನಿಜರೂಪ ಬಯಲಾಗಿದೆ. ಆದರೆ ಮಾನವೀಯ ಗುಣದ ಸಿದ್ದರಾಮಯ್ಯ ಮತ್ತೆ ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಸಹಿಸಲಾಗದೆ ಜನರಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿ ಕೂಡ ಹಿಂದೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದು ಇಂದಿಗೂ ಕೇವಲ ಘೋಷಣೆಯಾಗಿಯೇ ಉಳಿದಿದೆ. ಅದ್ಯಾವುದೂ ಕೂಡ ಅನುಷ್ಠಾನಕ್ಕೆ ಬಂದಿಲ್ಲ ಎನ್ನುವುದನ್ನು ರಾಜ್ಯ ಹಾಗೂ ಜಿಲ್ಲೆಯ ಜನರು ಮರೆತಿಲ್ಲ. ಈಗಷ್ಠೇ ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು ಅದಕ್ಕೂ ಮೊದಲೇ ಬಿಜೆಪಿಗರು ಗ್ಯಾರಂಟಿ ಕಾರ್ಡಿನ ವಿರುದ್ದ ಹೋರಾಟಕ್ಕೆ ಹೊರಟಿಸಿರುವುದು ವಿಪರ್ಯಾಸ ಎನ್ನಬಹುದು.
ತಾವು ಹಿಂದೆ ತಿರುಗಿ ನೋಡಿ ತಾವು ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಭರವಸೆಯನ್ನು ನೋಡಿದರೆ ಎಲ್ಲವೂ ಅರ್ಥವಾಗುತ್ತದೆ. ತಮ್ಮ ಅವಧಿಯ ಘೋಷಣೆಗಳನ್ನು ಬಾಕಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷದ ಗ್ಯಾರಂಟಿಯ ಬಗ್ಗೆ ಮಾತನಾಡಲು ತಮಗೆ ಯಾವುದೇ ನೈತಿಕತೆಯೂ ಇಲ್ಲ. ತಾವು ತಕ್ಷಣವೇ ಜನರಲ್ಲಿ ಗೊಂದಲ ಸೃಷ್ಟಿಸುವುದ್ದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷಕ್ಕೆ ಕೂಡ ಹೋರಾಟದ ಕಿಚ್ಚು ಇದ್ದು ಮುಂದೆ ಬಿಜೆಪಿಯು ಘೋಷಣೆ ಮಾಡಿದ ಭರವಸೆಗಳನ್ನು ಈಡೇರಿಸಲು ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದೀತು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…