ಉಡುಪಿ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರಿ ಕಾಲೇಜಿನ ಪ್ರಾಂಶುಪಾಲರ ಪ್ರಶಸ್ತಿ ತಡೆ ಹಿಡಿದಿರುವುದು ದ್ವೇಷ ರಾಜಕೀಯ ಎಂಬ ಹೇಳಿಕೆ ನೀಡಿರುವ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ಪಾಠ ಕಲಿಯಬೇಕಾಗಿಲ್ಲ ಎಂದು ಉಡುಪಿ ಜಿಲ್ಲಾ ಎನ್ ಎಸ್ ಯು ಐ ಅಧ್ಯಕ್ಷ ಸೌರಭ್ ಬಲ್ಲಾಳ್ ಹೇಳಿದ್ದಾರೆ.
ಹಿಜಾಬ್ ವಿಚಾರದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅನಾವಶ್ಯಕವಾಗಿ ಶಿಕ್ಷಣ ಪಡೆಯುವ ಮುಗ್ದ ಮಕ್ಕಳಲ್ಲಿ ಕೋಮು ಭಾವನೆ ಮೂಡಿಸುವ ಕೆಲಸ ಮಾಡಿತ್ತು. ಈ ಮೂಲಕ ಶಿಕ್ಷಣ ಪಡೆಯುವ ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಮೂಲಕ ಧರ್ಮ ದ್ವೇಷದ ರಾಜಕೀಯ ಮಾಡಿ ಈಗ ಕಾಂಗ್ರೆಸ್ ಪಕ್ಷವನ್ನು ದೂಷಣೆ ಮಾಡುವ ಕೆಲಸ ಮಾಡುತ್ತಿರುವುದು ನಾಚೀಕೆಗೇಡು.
ಹಿಜಾಬ್ ವಿಚಾರದಲ್ಲಿ ಕುಂದಾಪುರ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬಿ.ಜಿ ರಾಮಕೃಷ್ಣ ಅವರು ಶಿಕ್ಷಣ ಕಲಿಯಲು ಬಂದ ವಿದ್ಯಾರ್ಥಿಗಳನ್ನು ಕಾಲೇಜಿನ ಕ್ಯಾಂಪಸ್ ಒಳಗಡೆ ಕಾಲಿಡದಂತೆ ಗೇಟ್ ಮುಚ್ಚಿರುವುದು ಆಘಾತಕಾರಿ ಸಂಗತಿಯಾಗಿತ್ತು. ಅಧಿಕಾರಿಗಳ ಕಣ್ತಪ್ಪಿನಿಂದ ಅದೇ ಪ್ರಾಂಶುಪಾಲರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದು ಸಮಾಜಕ್ಕೆ ತಪ್ಪು ಸಂದೇಶ ಹೋಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ರಾಷ್ಟ್ರ ಕವಿ ಕುವೆಂಪು ಅವರ ಪ್ರಕಾರ ಮಕ್ಕಳು ಅಂದ್ರೆ ವಿಶ್ವ ಮಾನವರು. ಆದ್ರೆ ಬಿಜೆಪಿಯವರು ಮಕ್ಕಳನ್ನು ಅಲ್ಪ ಮಾನವರನ್ನಾಗಿ ಮಾಡುವ ಕೆಲಸ ಮಾಡಿದ್ದರು.
ಶಿಕ್ಷಣ ಕಾಶಿ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಅವಧಿಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯು ಪರೀಕ್ಷೆಯ ಫಲಿತಾಂಶದಲ್ಲಿ ಹಿನ್ನಡೆ ಕಾಣಲು ಇದೇ ಹಿಜಾಬ್ ವಿವಾದ ಕಾರಣವಾಗಿತ್ತು ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾ ಕಾಲೇಜುಗಳಲ್ಲಿ ಧರ್ಮ ರಾಜಕೀಯವನ್ನು ಮಾಡಲು ಅವಕಾಶ ನೀಡದೆ ಶಿಕ್ಷಣಕ್ಕೆ ಒತ್ತು ನೀಡಿದ ಪರಿಣಾಮ ಪ್ರಥಮ ಸ್ಥಾನವನ್ನು ಕಾಣಲು ಸಾಧ್ಯವಾಗಿದೆ. ಇದನ್ನು ಯುವ ಬಿಜೆಪಿ ಅಧ್ಯಕ್ಷರು ಮೊದಲು ತಿಳಿದುಕೊಂಡು ಬಳಿಕ ದ್ವೇಷ ರಾಜಕಾರಣದ ಕುರಿತು ಮಾತನಾಡಲಿ. ಕಾಂಗ್ರೆಸ್ ಸದಾ ಸರ್ವ ಜನಾಂಗದ ಶಾಂತಿಯ ತೋಟವನ್ನು ಕಾಣಲು ಪ್ರಯತ್ನಿಸುತ್ತದೆ ಹೊರತು ದ್ವೇಷದ ರಾಜಕೀಯ ಮಾಡುವುದು ಬಿಜೆಪಿ ಪಕ್ಷ ಎನ್ನುವುದು ಜಗತ್ತಿಗೆ ತಿಳಿದ ವಿಚಾರವಾಗಿದೆ ಎಂದು ಸೌರಭ್ ಬಲ್ಲಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…