Featured

ಉಡುಪಿ  :ಪ್ರಸಾದ್ ಕಾಂಚನ್ ತಾಕತ್ತಿದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಿ : ಹಿಂದೂ ಯುವ ಸೇನೆ – vishwanews24

ಪ್ರಸಾದ್ ಕಾಂಚನ್ ತಾಕತ್ತಿದ್ದರೆ  ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಿ ಅದಕ್ಕೆ ತಕ್ಕ ಉತ್ತರ ನೀಡಲು ಜಿಲ್ಲೆಯ ಹಿಂದೂ ಕಾರ್ಯಕರ್ತರು ಸಿದ್ಧ  : ಹಿಂದೂ ಯುವ ಸೇನೆ ಎಚ್ಚರಿಕೆ

ಉಡುಪಿ  : ಕಾಂಗ್ರೆಸ್ ಪಕ್ಷದಲ್ಲಿ ಬಾಲಿಶ ಹೇಳಿಕೆಗಳಿಂದಲೇ ಕುಖ್ಯಾತನಾದ ಪ್ರಸಾದ್ ಕಾಂಚನ್ ಶಾಸಕರನ್ನು ಟೀಕಿಸುವ ಭರದಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದು, ಅವನಿಗೆ ತಾಕತ್ ಇದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಿ ಅದಕ್ಕೆ ತಕ್ಕ ಉತ್ತರ ನೀಡಲು ಜಿಲ್ಲೆಯ ಹಿಂದೂ ಕಾರ್ಯಕರ್ತರು ಸಿದ್ಧ ಎಂದು ಹಿಂದೂ ಯುವ ಸೇನೆ ಉಡುಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

ಸದಾ ಹಿಂದೂ ಧಾರ್ಮಿಕ ಭಾವನೆಗಳನ್ನು ಅವಹೇಳನ ಮಾಡುತ್ತಾ ಬಂದಿರುವ ಪ್ರಸಾದ್ ಕಾಂಚನ್ ಕರಾವಳಿ ಜಿಲ್ಲೆಯಲ್ಲಿ ಹಿಂದುತ್ವದ ವಿಚಾರದಲ್ಲಿ ಸದಾ ಮುಂಚೂಣಿಯಲ್ಲಿರುವ ಉಡುಪಿ ಶಾಸಕರನ್ನು ಏಕವಚನದಲ್ಲಿ ಟೀಕಿಸುತ್ತಾ ಬಿಟ್ಟಿ ಪ್ರಚಾರ ಬಯಸುವ ಚಟವನ್ನು ತಕ್ಷಣ ನಿಲ್ಲಿಸಲಿ.

ತುಳುನಾಡಿನ ದೈವಾರಾಧನೆಯ ಧಾರ್ಮಿಕ ಆಚರಣೆಯ ಭಾಗವಾದ ಕೋಳಿ ಅಂಕಕ್ಕೆ ಕಾನೂನಾತ್ಮಕ ಅವಕಾಶ ನೀಡುವಂತೆ ಸದನದಲ್ಲಿ ಶಾಸಕರು ಪ್ರಶ್ನಿಸಿದಾಗ ಜಿಲ್ಲೆಯ ಜನತೆಗೆ ಅವಮಾನವಾಗಿದೆ ಎಂದು ಭಾಷಣ ಮಾಡುವ ಪ್ರಸಾದ್ ಕಾಂಚನ್ ಗೆ ಮೊನ್ನೆ ಹಿಂದೂಗಳ ಪೂಜ್ಯ ಗೋಮಾತೆಯ ರುಂಡವನ್ನು ರಸ್ತೆಯಲ್ಲಿ ಎಸೆದು ಹೋಗಿ ಹಿಂದೂಗಳ ಭಾವನೆಗೆ ಧಕ್ಕೆ ತಂದಾಗ ಮಾತ್ರ ಯಾವುದೇ ಅವಮಾನವಾಗಿಲ್ಲ.

ಉಡುಪಿ ಶಾಸಕರು ಹಿಂದೂತ್ವ, ರಾಷ್ಟ್ರೀಯತೆ, ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜೀ ಮಾಡಿಲ್ಲ. ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಮಸೂದೆ ಬಗ್ಗೆ ಸದನದಲ್ಲಿ ವಿರೋಧ ಪಕ್ಷದ ಶಾಸಕನಾಗಿ ವಿರೋಧ ಮಾಡಿದಕ್ಕೆ ಸದನದಿಂದ ಅಮಾನತುಗೊಂಡರೂ ತಮ್ಮ ಸಿದ್ಧಾಂತದ ಬಗ್ಗೆ ಬದ್ಧತೆ ಮೆರೆದಿದ್ದಾರೆ.

ಮಂಗಳೂರು, ಸುರತ್ಕಲ್ ನಲ್ಲಿ ಸುತ್ತಾಡಿಕೊಂಡಿದ್ದ ಈತ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಾಟರಿ ಕ್ಯಾಂಡಿಡೇಟ್ ಆಗಿ ಉಡುಪಿಗೆ ಬಂದು, ಹಿಂದುತ್ವದ ಭದ್ರಕೋಟೆಯಲ್ಲಿ ಹೀನಾಯವಾಗಿ ಸೋತು ಸುಣ್ಣವಾದ ಈತನ ಎಡಬಿಡಂಗಿ ಮಾತುಗಳು ಇದೀಗ ಉಡುಪಿ ಕಾಂಗ್ರೆಸ್ ನಾಯಕರಿಗೆ ಅಸಹನೀಯವಾಗಿದೆ.

ಉಡುಪಿ ಶಾಸಕರು ಕೇವಲ ಓರ್ವ ಶಾಸಕ ಮಾತ್ರ ಅಲ್ಲ ಹಿಂದೂತ್ವದ ರಕ್ಷಣೆಗೆ ಸಂಘಟನೆಯಲ್ಲಿ ಗುರುತಿಸಿಕೊಂಡ ಪ್ರತಿಯೊಬ್ಬ ಹಿಂದೂ ಕಾರ್ಯಕರ್ತನ ಪ್ರತಿನಿಧಿಯಾಗಿ ವಿಧಾನಸಭೆಯನ್ನು ಪ್ರವೇಶ ಮಾಡಿದ್ದು, ಅವರ ಕಾರ್ಯಕ್ಷಮತೆ, ಬದ್ಧತೆಯನ್ನು ಗುರುತಿಸಿಯೇ ಉಡುಪಿಯ ಜನತೆ ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ. ಅವರ ಯೋಗ್ಯತೆಯನ್ನು ಅರಿಯದೇ ಮೊನ್ನೆ ಮೊನ್ನೆ ಉಡುಪಿಗೆ ಬಂದು ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕನ ಕೃಪೆಯಿಂದ ರಾಜಕೀಯ ಪ್ರವೇಶಿಸಿದ ನಿನಗೆ ಯೋಗ್ಯತೆ ಇಲ್ಲ.

ಸಾಮಾನ್ಯ ಹಿಂದೂ ಕಾರ್ಯಕರ್ತರಾಗಿ, ಸಹಕಾರಿ,.ಮೀನುಗಾರಿಕ, ಧಾರ್ಮಿಕ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಗರಸಭಾ ಸದಸ್ಯರಾಗಿ ಓರ್ವ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಹಂತ ಹಂತವಾಗಿ ಪಕ್ಷ ಹಾಗೂ ಸಂಘ ಪರಿವಾರದ ಹಿರಿಯರ ಮಾರ್ಗದರ್ಶನದಿಂದ ಶಾಸಕರಾಗಿ ಆಯ್ಕೆಯಾಗಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾ ಸದಾ ಕಾಲ ಜನರ ಜೊತೆ ಇರುವ ಉಡುಪಿ ಶಾಸಕರು ನಿನ್ನಂತಹ ಅವಿವೇಕಿ ವ್ಯಕ್ತಿಗಳ ಟೀಕೆಯನ್ನು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದನ್ನು ಮರೆಯಬೇಡ.

ಮುಂದಿನ ದಿನಗಳಲ್ಲಿ ಇಂತಹ ಮತಿಗೇಡಿ, ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿದಲ್ಲಿ ನಿನ್ನ ಮನೆಗೆ ಮುತ್ತಿಗೆ ಹಾಕುವ ಅವಕಾಶ ನೀಡಬೇಡ ಎಂದು ಹಿಂದೂ ಯುವ ಸೇನೆ ಉಡುಪಿ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಹಿರಿಯಡ್ಕ, ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ಉಡುಪಿ ನಗರ ಅಧ್ಯಕ್ಷ ಸುನೀಲ್ ಪೂಜಾರಿ ನೇಜಾರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

6 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago