Featured

ಉಡುಪಿ: ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ  – vishwanews24

ಉಡುಪಿ: ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ

ಉಡುಪಿ: ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿರುವ ಕಾರಣ ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ದವಾಗಿರುವ ಸಾಧ್ಯತೆ ಇದ್ದು ಪ್ರವಾಸಿಗರು ಸಮುದ್ರಕ್ಕೆ ಇಳಿದರೆ ಅನಾಹುತವಾಗುವ ಸಾಧ್ಯತೆ ಇದೆ.ಈ ಹಿನ್ನಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ಮಲ್ಪೆ ಬೀಚ್​ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ.

ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿಯನ್ನು ಸದ್ಯಕ್ಕೆ ನಿರ್ಮಿಸಲಾಗಿದೆ. ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಲಾಗಿದೆ. ಇದರ ಜೊತೆಗೆ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಎಟಿಬಿ ಸ್ಯಾಂಡ್ ಬೈಕ್ ಮೂಲಕ ಬೀಚ್​​ನ್ನು ಗಸ್ತು ತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಾ, ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮುದ್ರ ಪ್ರಸಿದ್ಧಿ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಬಲೆಯನ್ನು ದಾಟಿ ಹೋಗದಂತೆ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago