ಉಡುಪಿ : ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಿತ್ಯವೂ ಪೂಜೆಯ ವೇಳೆ ದೇವರಿಗೆ ತಲೆ ತಗ್ಗಿಸಿ ಪ್ರಾರ್ಥನೆ ಸಲ್ಲಿಸುತ್ತೆ ಈ ಗೋಮಾತೆ -Vishwanews24

ಉಡುಪಿ : ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಿತ್ಯವೂ ಪೂಜೆಯ ವೇಳೆ ದೇವರಿಗೆ ತಲೆ ತಗ್ಗಿಸಿ ಪ್ರಾರ್ಥನೆ ಸಲ್ಲಿಸುತ್ತೆ ಈ ಗೋಮಾತೆ -Vishwanews24

ಉಡುಪಿ: ಗೋಮಾತೆಯೊಂದು ದೇವಸ್ಥಾನದಲ್ಲಿ ನಡೆಯುವ ಪೂಜೆಯ ವೇಳೆ ಜನರ ಜೊತೆ ದೇವರಿಗೆ ತಲೆ ತಗ್ಗಿಸಿ ಪ್ರಾರ್ಥನೆ ಸಲ್ಲಿಸುವ ಪ್ರಸಂಗವೊಂದು ಅಚ್ಚರಿಗೆ ಕಾರಣವಾಗಿದೆ.

ಉಡುಪಿಯ ಪ್ರಸಿದ್ಧ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಹಸುವೊಂದು ನಿತ್ಯವೂ ಪೂಜೆ ಸಲ್ಲಿಸುತ್ತಿದೆ. ಈ ಗೋಮಾತೆ ನಿತ್ಯವೂ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯುವ ಪೂಜೆಯ ಸಂದರ್ಭ ಶ್ರೀ ನಾಗ ದೇವರ ಕಟ್ಟೆಯ ಎದುರಿನ ಮೆಟ್ಟಿಲಿನ ಮಧ್ಯದಲ್ಲಿ ಶಿರಬಾಗಿ ನಮಿಸಿ ನಿಲ್ಲುತ್ತದೆ.

ಕಳೆದ ಹಲವು ದಿನಗಳಿಂದಲೂ ನಡೆಯುತ್ತಿರುವ ಈ ವಿದ್ಯಮಾನ ನೋಡಿದ ದೇಗುಲಕ್ಕೆ ಆಗಮಿಸುವ ಭಕ್ತರು ಬೆರಗಾಗಿದ್ದಾರೆ. ಪ್ರತಿ ದಿನ ಮುಂಜಾನೆ ದೇವಳದ ಶ್ರೀನಾಗ ದೇವರ ಕಟ್ಟೆಯ ಎದುರು ಬಂದು ನಿಲ್ಲುವ ಈ ಗೋವು ಅಪರಾಹ್ನದ ದೇಗುಲದಲ್ಲಿ ನಡೆಯುವ ಮಹಾಪೂಜೆಯವರೆಗು ಕೂಡ ನಿಂತ ಸ್ಥಳವನ್ನು ಬಿಟ್ಟು ತೆರಳದೇ ಇರುವುದು ಭಕ್ತರ ಆಶ್ಚರ್ಯಕ್ಕೆ ಕಾರಣವಾಗಿದೆ.

ಈ ಅಚ್ಚರಿಯ ಘಟನೆಯ ಬಗ್ಗೆ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದ ಭಕ್ತ ದಿವಾಕರ್ ಮಾತನಾಡಿ, ಕೆಲವು ಮೂಕಪ್ರಾಣಿಗಳು ಮನುಷ್ಯರು ಮಾಡುವುದನ್ನು ಅನುಕರಣೆ ಮಾಡುತ್ತವೆ. ಆದರೆ ಗೋವು ಆ ಜಾತಿಗೆ ಸೇರಿಲ್ಲ. ಗೋವು ಅನುಕರಣೆ ಮಾಡುವ ನಿದರ್ಶನ ನನ್ನ ಅನುಭವದ ಪ್ರಕಾರ ಇದೇ ಮೊದಲು. ಕುಂಭಾಸಿ ಸಿದ್ಧಿವಿನಾಯಕ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ದೇವರು. ಪ್ರತಿದಿನ ಇಲ್ಲಿ ದನ ದೇವರಿಗೆ ಭಕ್ತಿಯನ್ನು ಅರ್ಪಿಸುತ್ತಿದೆ. ಇದರಿಂದ ಕುಂಭಾಸಿ ಗಣಪತಿ ಮೂಕಪ್ರಾಣಿಗಳಿಗೂ ಒಲಿದಿದ್ದಾನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

12 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

12 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

15 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

16 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago