Featured

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ -Vishwanews24

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

ಉಡುಪಿ, : ಜಿಲ್ಲೆಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ನೆರೆ ಪ್ರವಾಹ, ಮನೆ ಹಾನಿ, ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರು ಛಾಯಾಚಿತ್ರದೊಂದಿಗೆ ಜಿಲ್ಲಾಡಳಿತದ ಗಮನಕ್ಕೆ ತಂದು, ಆ ಮೂಲಕ ಸಂಬAಧಪಟ್ಟ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುವುದರೊಂದಿಗೆ ಕ್ಷಿಪ್ರಗತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಜಿಲ್ಲಾಡಳಿತವು ದೂರವಾಣಿ ಸಂಖ್ಯೆಯೊoದಿಗೆ ವಾಟ್ಸ್ಅಪ್ ಸಂಖ್ಯೆಯನ್ನು 9880831516 ಆರಂಭಗೊಳಿಸಿದ್ದು, ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಕೋರಿದೆ.

ಸಾರ್ವಜನಿಕರು ವಾಟ್ಸ್ಅಪ್ ಮೂಲಕ ಯಾವುದೇ ಸಮಸ್ಯೆಗಳಿಗೆ ಸಂಬAಧಿಸಿದ ವೀಡಿಯೋ, ಛಾಯಾಚಿತ್ರಗಳನ್ನು ಕಳುಹಿಸುವ ಸಂಧರ್ಭದಲ್ಲಿ ಸೂಕ್ತ ಜಿ.ಪಿ.ಎಸ್ ನೊಂದಿಗಿನ ಛಾಯಾಚಿತ್ರ/ ವೀಡಿಯೋ, ಘಟನೆ ನಡೆದ ಸ್ಧಳದ ಖಚಿತ ಮಾಹಿತಿ, ದಿನಾಂಕ ಹಾಗೂ ಸಮಯದೊಂದಿಗೆ, ಘಟಿಸಿರುವ ಸಮಸ್ಯೆಗಳ ಬಗ್ಗೆ ಚುಟುಕಾದ ವಿವರ ಹಾಗೂ ಯಾವ ಇಲಾಖೆಗಳಿಂದ, ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂಬ ಮಾಹಿತಿಯನ್ನು ನಮೂದಿಸಿದ್ದಲ್ಲಿ ತಿಳಿಸಿರುವ ಸಮಸ್ಯೆಗಳ ಕುರಿತು, ವಿಳಂಬರಹಿತವಾಗಿ ಜರೂರಾದ ಕ್ರಮವಹಿಸಲು ಸಾಧ್ಯವಾಗುತ್ತದೆ.

ಪ್ರಸ್ತುತ ಮಳೆಗಾಲದ ಸಂಧರ್ಭದಲ್ಲಿ ಸಂಭವಿಸಬಹುದಾದ ಅವಘಡಗಳು, ಸಾರ್ವಜನಿಕರು ಎದುರಿಸುವ ತೊಂದರೆಗಳು, ಇತರ ಅನಾನುಕೂಲಗಳ ಕುರಿತು ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು, ಮಾಹಿತಿಯನ್ನು ಪಡೆಯಲು ಅಥವಾ ಇನ್ನಾವುದೇ ರೀತಿಯಲ್ಲಿ ತುರ್ತು ಸಂಧರ್ಭದಲ್ಲಿ ಜಿಲ್ಲಾಡಳಿತದ ನೆರವನ್ನು ಪಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯಾಚರಿಸುವ ಟೋಲ್ ಫ್ರೀ ಸಂಖ್ಯೆ ( 24*7 ) ಕಂಟ್ರೋಲ್ ರೂಂ – 1077 ಹಾಗೂ ದೂರವಾಣಿ ಸಂಖ್ಯೆ : 0820-2574802 ಪ್ರಸ್ತುತ ಸಾರ್ವಜನಿಕರ ಸೇವೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

4 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

4 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

4 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

19 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

19 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago