Featured

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ -Vishwanews24

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

ಉಡುಪಿ, : ಜಿಲ್ಲೆಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ನೆರೆ ಪ್ರವಾಹ, ಮನೆ ಹಾನಿ, ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರು ಛಾಯಾಚಿತ್ರದೊಂದಿಗೆ ಜಿಲ್ಲಾಡಳಿತದ ಗಮನಕ್ಕೆ ತಂದು, ಆ ಮೂಲಕ ಸಂಬAಧಪಟ್ಟ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುವುದರೊಂದಿಗೆ ಕ್ಷಿಪ್ರಗತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಜಿಲ್ಲಾಡಳಿತವು ದೂರವಾಣಿ ಸಂಖ್ಯೆಯೊoದಿಗೆ ವಾಟ್ಸ್ಅಪ್ ಸಂಖ್ಯೆಯನ್ನು 9880831516 ಆರಂಭಗೊಳಿಸಿದ್ದು, ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಕೋರಿದೆ.

ಸಾರ್ವಜನಿಕರು ವಾಟ್ಸ್ಅಪ್ ಮೂಲಕ ಯಾವುದೇ ಸಮಸ್ಯೆಗಳಿಗೆ ಸಂಬAಧಿಸಿದ ವೀಡಿಯೋ, ಛಾಯಾಚಿತ್ರಗಳನ್ನು ಕಳುಹಿಸುವ ಸಂಧರ್ಭದಲ್ಲಿ ಸೂಕ್ತ ಜಿ.ಪಿ.ಎಸ್ ನೊಂದಿಗಿನ ಛಾಯಾಚಿತ್ರ/ ವೀಡಿಯೋ, ಘಟನೆ ನಡೆದ ಸ್ಧಳದ ಖಚಿತ ಮಾಹಿತಿ, ದಿನಾಂಕ ಹಾಗೂ ಸಮಯದೊಂದಿಗೆ, ಘಟಿಸಿರುವ ಸಮಸ್ಯೆಗಳ ಬಗ್ಗೆ ಚುಟುಕಾದ ವಿವರ ಹಾಗೂ ಯಾವ ಇಲಾಖೆಗಳಿಂದ, ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂಬ ಮಾಹಿತಿಯನ್ನು ನಮೂದಿಸಿದ್ದಲ್ಲಿ ತಿಳಿಸಿರುವ ಸಮಸ್ಯೆಗಳ ಕುರಿತು, ವಿಳಂಬರಹಿತವಾಗಿ ಜರೂರಾದ ಕ್ರಮವಹಿಸಲು ಸಾಧ್ಯವಾಗುತ್ತದೆ.

ಪ್ರಸ್ತುತ ಮಳೆಗಾಲದ ಸಂಧರ್ಭದಲ್ಲಿ ಸಂಭವಿಸಬಹುದಾದ ಅವಘಡಗಳು, ಸಾರ್ವಜನಿಕರು ಎದುರಿಸುವ ತೊಂದರೆಗಳು, ಇತರ ಅನಾನುಕೂಲಗಳ ಕುರಿತು ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು, ಮಾಹಿತಿಯನ್ನು ಪಡೆಯಲು ಅಥವಾ ಇನ್ನಾವುದೇ ರೀತಿಯಲ್ಲಿ ತುರ್ತು ಸಂಧರ್ಭದಲ್ಲಿ ಜಿಲ್ಲಾಡಳಿತದ ನೆರವನ್ನು ಪಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯಾಚರಿಸುವ ಟೋಲ್ ಫ್ರೀ ಸಂಖ್ಯೆ ( 24*7 ) ಕಂಟ್ರೋಲ್ ರೂಂ – 1077 ಹಾಗೂ ದೂರವಾಣಿ ಸಂಖ್ಯೆ : 0820-2574802 ಪ್ರಸ್ತುತ ಸಾರ್ವಜನಿಕರ ಸೇವೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

13 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

13 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago