Featured

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ -Vishwanews24

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

ಉಡುಪಿ, : ಜಿಲ್ಲೆಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ನೆರೆ ಪ್ರವಾಹ, ಮನೆ ಹಾನಿ, ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರು ಛಾಯಾಚಿತ್ರದೊಂದಿಗೆ ಜಿಲ್ಲಾಡಳಿತದ ಗಮನಕ್ಕೆ ತಂದು, ಆ ಮೂಲಕ ಸಂಬAಧಪಟ್ಟ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುವುದರೊಂದಿಗೆ ಕ್ಷಿಪ್ರಗತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಜಿಲ್ಲಾಡಳಿತವು ದೂರವಾಣಿ ಸಂಖ್ಯೆಯೊoದಿಗೆ ವಾಟ್ಸ್ಅಪ್ ಸಂಖ್ಯೆಯನ್ನು 9880831516 ಆರಂಭಗೊಳಿಸಿದ್ದು, ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಕೋರಿದೆ.

ಸಾರ್ವಜನಿಕರು ವಾಟ್ಸ್ಅಪ್ ಮೂಲಕ ಯಾವುದೇ ಸಮಸ್ಯೆಗಳಿಗೆ ಸಂಬAಧಿಸಿದ ವೀಡಿಯೋ, ಛಾಯಾಚಿತ್ರಗಳನ್ನು ಕಳುಹಿಸುವ ಸಂಧರ್ಭದಲ್ಲಿ ಸೂಕ್ತ ಜಿ.ಪಿ.ಎಸ್ ನೊಂದಿಗಿನ ಛಾಯಾಚಿತ್ರ/ ವೀಡಿಯೋ, ಘಟನೆ ನಡೆದ ಸ್ಧಳದ ಖಚಿತ ಮಾಹಿತಿ, ದಿನಾಂಕ ಹಾಗೂ ಸಮಯದೊಂದಿಗೆ, ಘಟಿಸಿರುವ ಸಮಸ್ಯೆಗಳ ಬಗ್ಗೆ ಚುಟುಕಾದ ವಿವರ ಹಾಗೂ ಯಾವ ಇಲಾಖೆಗಳಿಂದ, ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂಬ ಮಾಹಿತಿಯನ್ನು ನಮೂದಿಸಿದ್ದಲ್ಲಿ ತಿಳಿಸಿರುವ ಸಮಸ್ಯೆಗಳ ಕುರಿತು, ವಿಳಂಬರಹಿತವಾಗಿ ಜರೂರಾದ ಕ್ರಮವಹಿಸಲು ಸಾಧ್ಯವಾಗುತ್ತದೆ.

ಪ್ರಸ್ತುತ ಮಳೆಗಾಲದ ಸಂಧರ್ಭದಲ್ಲಿ ಸಂಭವಿಸಬಹುದಾದ ಅವಘಡಗಳು, ಸಾರ್ವಜನಿಕರು ಎದುರಿಸುವ ತೊಂದರೆಗಳು, ಇತರ ಅನಾನುಕೂಲಗಳ ಕುರಿತು ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು, ಮಾಹಿತಿಯನ್ನು ಪಡೆಯಲು ಅಥವಾ ಇನ್ನಾವುದೇ ರೀತಿಯಲ್ಲಿ ತುರ್ತು ಸಂಧರ್ಭದಲ್ಲಿ ಜಿಲ್ಲಾಡಳಿತದ ನೆರವನ್ನು ಪಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯಾಚರಿಸುವ ಟೋಲ್ ಫ್ರೀ ಸಂಖ್ಯೆ ( 24*7 ) ಕಂಟ್ರೋಲ್ ರೂಂ – 1077 ಹಾಗೂ ದೂರವಾಣಿ ಸಂಖ್ಯೆ : 0820-2574802 ಪ್ರಸ್ತುತ ಸಾರ್ವಜನಿಕರ ಸೇವೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

23 hours ago

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

23 hours ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

23 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

23 hours ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

23 hours ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

24 hours ago