Featured

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ -Vishwanews24

ಉಡುಪಿ : ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

ಉಡುಪಿ, : ಜಿಲ್ಲೆಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ನೆರೆ ಪ್ರವಾಹ, ಮನೆ ಹಾನಿ, ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರು ಛಾಯಾಚಿತ್ರದೊಂದಿಗೆ ಜಿಲ್ಲಾಡಳಿತದ ಗಮನಕ್ಕೆ ತಂದು, ಆ ಮೂಲಕ ಸಂಬAಧಪಟ್ಟ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುವುದರೊಂದಿಗೆ ಕ್ಷಿಪ್ರಗತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಜಿಲ್ಲಾಡಳಿತವು ದೂರವಾಣಿ ಸಂಖ್ಯೆಯೊoದಿಗೆ ವಾಟ್ಸ್ಅಪ್ ಸಂಖ್ಯೆಯನ್ನು 9880831516 ಆರಂಭಗೊಳಿಸಿದ್ದು, ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಕೋರಿದೆ.

ಸಾರ್ವಜನಿಕರು ವಾಟ್ಸ್ಅಪ್ ಮೂಲಕ ಯಾವುದೇ ಸಮಸ್ಯೆಗಳಿಗೆ ಸಂಬAಧಿಸಿದ ವೀಡಿಯೋ, ಛಾಯಾಚಿತ್ರಗಳನ್ನು ಕಳುಹಿಸುವ ಸಂಧರ್ಭದಲ್ಲಿ ಸೂಕ್ತ ಜಿ.ಪಿ.ಎಸ್ ನೊಂದಿಗಿನ ಛಾಯಾಚಿತ್ರ/ ವೀಡಿಯೋ, ಘಟನೆ ನಡೆದ ಸ್ಧಳದ ಖಚಿತ ಮಾಹಿತಿ, ದಿನಾಂಕ ಹಾಗೂ ಸಮಯದೊಂದಿಗೆ, ಘಟಿಸಿರುವ ಸಮಸ್ಯೆಗಳ ಬಗ್ಗೆ ಚುಟುಕಾದ ವಿವರ ಹಾಗೂ ಯಾವ ಇಲಾಖೆಗಳಿಂದ, ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂಬ ಮಾಹಿತಿಯನ್ನು ನಮೂದಿಸಿದ್ದಲ್ಲಿ ತಿಳಿಸಿರುವ ಸಮಸ್ಯೆಗಳ ಕುರಿತು, ವಿಳಂಬರಹಿತವಾಗಿ ಜರೂರಾದ ಕ್ರಮವಹಿಸಲು ಸಾಧ್ಯವಾಗುತ್ತದೆ.

ಪ್ರಸ್ತುತ ಮಳೆಗಾಲದ ಸಂಧರ್ಭದಲ್ಲಿ ಸಂಭವಿಸಬಹುದಾದ ಅವಘಡಗಳು, ಸಾರ್ವಜನಿಕರು ಎದುರಿಸುವ ತೊಂದರೆಗಳು, ಇತರ ಅನಾನುಕೂಲಗಳ ಕುರಿತು ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು, ಮಾಹಿತಿಯನ್ನು ಪಡೆಯಲು ಅಥವಾ ಇನ್ನಾವುದೇ ರೀತಿಯಲ್ಲಿ ತುರ್ತು ಸಂಧರ್ಭದಲ್ಲಿ ಜಿಲ್ಲಾಡಳಿತದ ನೆರವನ್ನು ಪಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯಾಚರಿಸುವ ಟೋಲ್ ಫ್ರೀ ಸಂಖ್ಯೆ ( 24*7 ) ಕಂಟ್ರೋಲ್ ರೂಂ – 1077 ಹಾಗೂ ದೂರವಾಣಿ ಸಂಖ್ಯೆ : 0820-2574802 ಪ್ರಸ್ತುತ ಸಾರ್ವಜನಿಕರ ಸೇವೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

24 minutes ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

50 minutes ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

57 minutes ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

1 hour ago

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು – vishwanews24

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ…

1 hour ago

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

1 day ago