ಉಡುಪಿ: ರಾಜ್ಯದಲ್ಲಿ 2 ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಹಾಕಲು ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಪ್ರಮಾಣಪತ್ರದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ಉಡುಪಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಲಸಿಕೆ ಹಾಕಲು ಕೇಂದ್ರದಿಂದ ಅನುಮತಿ ಸಿಕ್ಕ ಕೂಡಲೇ ಲಸಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಈಗಾಗಲೇ ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆ ಹಾಕುವಲ್ಲಿ ಶೇ 82ರಷ್ಟು ಸಾಧನೆಯಾಗಿದ್ದು, ಎರಡನೇ ಡೋಸ್ ಲಸಿಕೆಯಲ್ಲಿ ಶೇ 36ರಿಂದ 37 ರಷ್ಟು ಗುರಿ ಮುಟ್ಟಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಮೊದಲ ಡೋಸ್ ಹಾಗೂ ಶೇ 70ರಷ್ಟು ಎರಡನೇ ಡೋಸ್ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆಜಾರಿ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಬೇರೆ ರಾಜ್ಯಗಳಲ್ಲಿರುವ ಮತಾಂತರ ನಿಷೇಧ ಕಾನೂನುಗಳನ್ನು ಅಧ್ಯಯನ ಮಾಡಿ, ಕಾಯ್ದೆ ಜಾರಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…