Featured

ಉಡುಪಿ : ಪ್ರಿಯಾಂಕರನ್ನು ಬಂಧ ಮುಕ್ತ ಗೊಳಿಸದಿದ್ದರೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟ – Vishwanews24

ಉಡುಪಿ : ಪ್ರಿಯಾಂಕರನ್ನು ಬಂಧ ಮುಕ್ತ ಗೊಳಿಸದಿದ್ದರೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟ – Vishwanews24

ಉಡುಪಿ: ಕೇಂದ್ರ ಸರಕಾರದ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕಳೆದ ಸುಮಾರು 425 ದಿನಗಳಿಂದ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತಿದ್ದರೂ ಕೇಂದ್ರ ಸರಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ.

ಈ ನಡುವೆ ರೈತರು ಉತ್ತರ ಪ್ರದೇಶದ ಲಖೀಮ್ ಪುರ ಖೇರಿಯಲ್ಲಿ ರೈತ ಪ್ರತಿಭಟನೆ ವೇಳೆ, ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶೀಶ್ ಮಿಶ್ರಾ ರೈತರ ಮೇಲೆಯೇ ಕಾರು ಚಲಾಯಿಸಿ ನಾಲ್ವರು ರೈತರು ಮೃತಪಟ್ಟಿದ್ದು, ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಸರಕಾರ ಬಂಧಿಸಿರುವುದು ಖಂಡನೀಯ.

ಉತ್ತರ ಪ್ರದೇಶ ಸರಕಾರ ಪ್ರಿಯಾಂಕರನ್ನು ಕೂಡಲೇ ಬಂಧಮುಕ್ತ ಗೊಳಿಸದಿದ್ದರೆ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಮಂಗಳೂರು : ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ – Vishwanews24

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವೆರೋನಿಕಾ ಕರ್ನೇಲಿಯೋ, ನವೀನ್‌ಚಂದ್ರ ಜೆ. ಶೆಟ್ಟಿ, ಶ್ಯಾಮಲ ಭಂಡಾರಿ, ಅಲೆವೂರು ಹರೀಶ್ ಕಿಣಿ, ಡಾ ಸುನಿತಾ ಶೆಟ್ಟಿ, ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ದಿನಕರ್ ಹೇರೂರು, ಶಂಕರ್ ಕುಂದರ್, ಸಂಪಿಗಹಾಡಿ ಸಂಜೀವ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಬಿಪಿನ್‌ಚಂದ್ರ ಪಾಲ್, ಭಾಸ್ಕರ್ ರಾವ್ ಕಿದಿಯೂರು, ದೇವಾನಂದ ಶೆಟ್ಟಿ, ದೇವಕಿ ಸಣ್ಣಯ್ಯ, ಕೀರ್ತಿ ಶೆಟ್ಟಿ, ಹಬೀಬ್ ಆಲಿ, ಕಿಶೋರ್ ಎರ್ಮಾಳ್, ಗೀತಾ ವಾಗ್ಳೆ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವರ್, ಶಶಿಧರ ಶೆಟ್ಟಿ ಎಲ್ಲೂರು, ಬಿ. ಭುಜಂಗ ಶೆಟ್ಟಿ. ಡೆರಿಕ್ ಡಿಸೋಜಾ, ಅಖಿಲೇಶ್ ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಜಯರಾಮ್ ನಾಯ್ಕ್, ರೋಶನ್ ಶೆಟ್ಟಿ, ಲೂಯಿಸ್ ಲೋಬೊ, ಗಣೇಶ್ ಪೂಜಾರಿ, ಮೀನಾಕ್ಷಿ ಮಾಧವ ಬನ್ನಂಜೆ, ಯತೀಶ್ ಕರ್ಕೇರಾ, ಸೂರ್ಯ ಸಾಲ್ಯಾನ್, ಶಾಂತಿ ಪಿರೇರಾ, ಚಂದ್ರಾವತಿ ಭಂಡಾರಿ, ಸುಗಂಧಿ ಶೇಖರ್, ಅನಿತಾ ಡಿ’ಸೋಜಾ, ಸೀಮಾ ಮಾರ್ಗರೇಟ್, ನತಾಲಿಯಾ ಮಾರ್ಟಿಸ್, ಹಮದ್, ಲಕ್ಷೀಶ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

23 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

23 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago