ಉಡುಪಿ: ಕೇಂದ್ರ ಸರಕಾರದ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕಳೆದ ಸುಮಾರು 425 ದಿನಗಳಿಂದ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತಿದ್ದರೂ ಕೇಂದ್ರ ಸರಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ.
ಈ ನಡುವೆ ರೈತರು ಉತ್ತರ ಪ್ರದೇಶದ ಲಖೀಮ್ ಪುರ ಖೇರಿಯಲ್ಲಿ ರೈತ ಪ್ರತಿಭಟನೆ ವೇಳೆ, ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶೀಶ್ ಮಿಶ್ರಾ ರೈತರ ಮೇಲೆಯೇ ಕಾರು ಚಲಾಯಿಸಿ ನಾಲ್ವರು ರೈತರು ಮೃತಪಟ್ಟಿದ್ದು, ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಸರಕಾರ ಬಂಧಿಸಿರುವುದು ಖಂಡನೀಯ.
ಉತ್ತರ ಪ್ರದೇಶ ಸರಕಾರ ಪ್ರಿಯಾಂಕರನ್ನು ಕೂಡಲೇ ಬಂಧಮುಕ್ತ ಗೊಳಿಸದಿದ್ದರೆ ಜಿಲ್ಲಾ ಕಾಂಗ್ರೆಸ್ನಿಂದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮಂಗಳೂರು : ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ – Vishwanews24
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವೆರೋನಿಕಾ ಕರ್ನೇಲಿಯೋ, ನವೀನ್ಚಂದ್ರ ಜೆ. ಶೆಟ್ಟಿ, ಶ್ಯಾಮಲ ಭಂಡಾರಿ, ಅಲೆವೂರು ಹರೀಶ್ ಕಿಣಿ, ಡಾ ಸುನಿತಾ ಶೆಟ್ಟಿ, ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ದಿನಕರ್ ಹೇರೂರು, ಶಂಕರ್ ಕುಂದರ್, ಸಂಪಿಗಹಾಡಿ ಸಂಜೀವ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಬಿಪಿನ್ಚಂದ್ರ ಪಾಲ್, ಭಾಸ್ಕರ್ ರಾವ್ ಕಿದಿಯೂರು, ದೇವಾನಂದ ಶೆಟ್ಟಿ, ದೇವಕಿ ಸಣ್ಣಯ್ಯ, ಕೀರ್ತಿ ಶೆಟ್ಟಿ, ಹಬೀಬ್ ಆಲಿ, ಕಿಶೋರ್ ಎರ್ಮಾಳ್, ಗೀತಾ ವಾಗ್ಳೆ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವರ್, ಶಶಿಧರ ಶೆಟ್ಟಿ ಎಲ್ಲೂರು, ಬಿ. ಭುಜಂಗ ಶೆಟ್ಟಿ. ಡೆರಿಕ್ ಡಿಸೋಜಾ, ಅಖಿಲೇಶ್ ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಜಯರಾಮ್ ನಾಯ್ಕ್, ರೋಶನ್ ಶೆಟ್ಟಿ, ಲೂಯಿಸ್ ಲೋಬೊ, ಗಣೇಶ್ ಪೂಜಾರಿ, ಮೀನಾಕ್ಷಿ ಮಾಧವ ಬನ್ನಂಜೆ, ಯತೀಶ್ ಕರ್ಕೇರಾ, ಸೂರ್ಯ ಸಾಲ್ಯಾನ್, ಶಾಂತಿ ಪಿರೇರಾ, ಚಂದ್ರಾವತಿ ಭಂಡಾರಿ, ಸುಗಂಧಿ ಶೇಖರ್, ಅನಿತಾ ಡಿ’ಸೋಜಾ, ಸೀಮಾ ಮಾರ್ಗರೇಟ್, ನತಾಲಿಯಾ ಮಾರ್ಟಿಸ್, ಹಮದ್, ಲಕ್ಷೀಶ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…