ಉಡುಪಿ: ಈ ಬಿಜೆಪಿ ನಾಯಕರುಗಳು ಇಡೀ ದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂ.1ಸ್ಥಾನದಲ್ಲಿದ್ದಾರೆ ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ ಹಾಗೂ ದಲಿತ ಸಮಾಜದ ನಾಯಕ ರಾಜ್ಯದ ಸಚಿವ ಪ್ರಿಯಾಂಕ ಖರ್ಗೆ ಇವರ ರಾಜೀನಾಮೆಯನ್ನು ಕೇಳುತ್ತಿರುವುದು ಈ ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ.
ಆತ್ಮಹತ್ಯೆ ಮಾಡಿಕೊಂಡಂತಹ ಗುತ್ತಿಗೆದಾರ ಡೆತ್ ನೋಟ್ ನಲ್ಲಿ ಪ್ರಿಯಾಂಕ ಖರ್ಗೆ ಅವರ ಹೆಸರನ್ನು ಉಲ್ಲೇಖಿಸಿಲ್ಲ. ಆದರೂ ಈ ಬಿಜೆಪಿಯವರು ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕೇಂದ್ರದ ಮೋದಿ ಸರಕಾರದ ಬೆಲೆ ಏರಿಕೆ ನೀತಿ, ಅಮಿತ್ ಶಾ ರವರ ಅಂಬೇಡ್ಕರ್ ವಿರೋಧಿ ನೀತಿ, ನಿರ್ಮಲಾ ಸೀತಾರಾಮ್ ರವರು ಅಗತ್ಯ ವಸ್ತುಗಳ ಮೇಲೆಯು ಜಿಎಸ್ಟಿ ಹಾಕಿ ಜನಸಾಮಾನ್ಯರ ಲೂಟಿ ಮಾಡುತ್ತಿದ್ದಾರೆ. ಇದನ್ನೆಲ್ಲವನ್ನು ಮರೆಮಾಚಲು ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ. ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಈ ಬಿಜೆಪಿಯವರು ಸಂಪೂರ್ಣವಾಗಿ ದಲಿತರ ವಿರೋಧಿಗಳು ಎಂದು ಸಾಬೀತಾಗಿದೆ.
ಪ್ರಿಯಾಂಕ ಖರ್ಗೆ ಅವರ ಜೊತೆ ಕೋಟ್ಯಾಂತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದಾರೆ ಎಂಬುದನ್ನು ಬಿಜೆಪಿ ನಾಯಕರು ತಿಳಿದುಕೊಳ್ಳಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…