Featured

ಉಡುಪಿ: ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳುತ್ತಿರುವುದು ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ – vishwanews24

ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ..

ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ  ಬಿಜೆಪಿಯವರು ಸಂಪೂರ್ಣ ದಲಿತರ ವಿರೋಧಿಗಳು : ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ: ಈ ಬಿಜೆಪಿ ನಾಯಕರುಗಳು ಇಡೀ ದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂ.1ಸ್ಥಾನದಲ್ಲಿದ್ದಾರೆ ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ ಹಾಗೂ ದಲಿತ ಸಮಾಜದ ನಾಯಕ ರಾಜ್ಯದ ಸಚಿವ ಪ್ರಿಯಾಂಕ ಖರ್ಗೆ ಇವರ ರಾಜೀನಾಮೆಯನ್ನು ಕೇಳುತ್ತಿರುವುದು ಈ ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ.

ಆತ್ಮಹತ್ಯೆ ಮಾಡಿಕೊಂಡಂತಹ ಗುತ್ತಿಗೆದಾರ ಡೆತ್ ನೋಟ್ ನಲ್ಲಿ ಪ್ರಿಯಾಂಕ ಖರ್ಗೆ ಅವರ ಹೆಸರನ್ನು ಉಲ್ಲೇಖಿಸಿಲ್ಲ. ಆದರೂ ಈ ಬಿಜೆಪಿಯವರು ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕೇಂದ್ರದ ಮೋದಿ ಸರಕಾರದ ಬೆಲೆ ಏರಿಕೆ ನೀತಿ, ಅಮಿತ್ ಶಾ ರವರ ಅಂಬೇಡ್ಕರ್ ವಿರೋಧಿ ನೀತಿ, ನಿರ್ಮಲಾ ಸೀತಾರಾಮ್ ರವರು ಅಗತ್ಯ ವಸ್ತುಗಳ ಮೇಲೆಯು ಜಿಎಸ್‌ಟಿ ಹಾಕಿ ಜನಸಾಮಾನ್ಯರ ಲೂಟಿ ಮಾಡುತ್ತಿದ್ದಾರೆ. ಇದನ್ನೆಲ್ಲವನ್ನು ಮರೆಮಾಚಲು ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ. ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಈ ಬಿಜೆಪಿಯವರು ಸಂಪೂರ್ಣವಾಗಿ ದಲಿತರ ವಿರೋಧಿಗಳು ಎಂದು ಸಾಬೀತಾಗಿದೆ.

ಪ್ರಿಯಾಂಕ ಖರ್ಗೆ ಅವರ ಜೊತೆ ಕೋಟ್ಯಾಂತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದಾರೆ ಎಂಬುದನ್ನು ಬಿಜೆಪಿ ನಾಯಕರು ತಿಳಿದುಕೊಳ್ಳಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago