Featured

ಉಡುಪಿ: ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳುತ್ತಿರುವುದು ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ – vishwanews24

ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ..

ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ  ಬಿಜೆಪಿಯವರು ಸಂಪೂರ್ಣ ದಲಿತರ ವಿರೋಧಿಗಳು : ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ: ಈ ಬಿಜೆಪಿ ನಾಯಕರುಗಳು ಇಡೀ ದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂ.1ಸ್ಥಾನದಲ್ಲಿದ್ದಾರೆ ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ ಹಾಗೂ ದಲಿತ ಸಮಾಜದ ನಾಯಕ ರಾಜ್ಯದ ಸಚಿವ ಪ್ರಿಯಾಂಕ ಖರ್ಗೆ ಇವರ ರಾಜೀನಾಮೆಯನ್ನು ಕೇಳುತ್ತಿರುವುದು ಈ ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ.

ಆತ್ಮಹತ್ಯೆ ಮಾಡಿಕೊಂಡಂತಹ ಗುತ್ತಿಗೆದಾರ ಡೆತ್ ನೋಟ್ ನಲ್ಲಿ ಪ್ರಿಯಾಂಕ ಖರ್ಗೆ ಅವರ ಹೆಸರನ್ನು ಉಲ್ಲೇಖಿಸಿಲ್ಲ. ಆದರೂ ಈ ಬಿಜೆಪಿಯವರು ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕೇಂದ್ರದ ಮೋದಿ ಸರಕಾರದ ಬೆಲೆ ಏರಿಕೆ ನೀತಿ, ಅಮಿತ್ ಶಾ ರವರ ಅಂಬೇಡ್ಕರ್ ವಿರೋಧಿ ನೀತಿ, ನಿರ್ಮಲಾ ಸೀತಾರಾಮ್ ರವರು ಅಗತ್ಯ ವಸ್ತುಗಳ ಮೇಲೆಯು ಜಿಎಸ್‌ಟಿ ಹಾಕಿ ಜನಸಾಮಾನ್ಯರ ಲೂಟಿ ಮಾಡುತ್ತಿದ್ದಾರೆ. ಇದನ್ನೆಲ್ಲವನ್ನು ಮರೆಮಾಚಲು ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ. ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಈ ಬಿಜೆಪಿಯವರು ಸಂಪೂರ್ಣವಾಗಿ ದಲಿತರ ವಿರೋಧಿಗಳು ಎಂದು ಸಾಬೀತಾಗಿದೆ.

ಪ್ರಿಯಾಂಕ ಖರ್ಗೆ ಅವರ ಜೊತೆ ಕೋಟ್ಯಾಂತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದಾರೆ ಎಂಬುದನ್ನು ಬಿಜೆಪಿ ನಾಯಕರು ತಿಳಿದುಕೊಳ್ಳಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

15 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

16 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

18 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

18 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

18 hours ago