ಉಡುಪಿ: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರಿಯತಮೆಯ ನಡುವೆ ವಾಗ್ವಾದ ಉಂಟಾಗಿ ಆತ ಬಸ್ ಅನ್ನು ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. ಉಡುಪಿಯಿಂದ ಸಂತೆಕಟ್ಟೆ ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಗೆ ನಿಟ್ಟೂರು ಬಳಿ ಬಸ್ ಚಾಲಕನ ಪ್ರೇಯಸಿ ಬಸ್ ಹತ್ತಿದ್ದಾಳೆ.
ಅಲ್ಲಿಂದಲೇ ಅವರ ನಡುವೆ ವಾಗ್ಯುದ್ಧ ನಡೆದಿದೆ. ನಿರ್ವಾಹಕ ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಪ್ರೇಯಸಿಯ ಕಿರಿಕಿರಿಯಿಂದ ರೋಸಿ ಹೋದ ಚಾಲಕ ಆಶೀರ್ವಾದ್ ಚಿತ್ರಮಂದಿರದ ಸ್ವಲ್ಪ ಮುಂದಕ್ಕೆ ಬಸ್ ನಿಲ್ಲಿಸಿ ಹೋಗಿದ್ದಾನೆ. ಪ್ರೇಯಸಿ ಮತ್ತೊಂದು ದಾರಿ ಹಿಡಿದರು.
ಪ್ರಯಾಣಿಕರು ಇದನ್ನೆಲ್ಲ ನೋಡಿಯೇ ಬಾಕಿಯಾಗಿದ್ದಾರೆ. ಸಂಜೆ ವೇಳೆ ಈ ಘಟನೆ ನಡೆದಿದ್ದು, ಬಳಿಕ ಬಸ್ ನಿರ್ವಾಹಕನೇ ಬಸ್ ಅನ್ನು ಚಲಾಯಿಸಿಕೊಂಡು ಹೋದ ಘಟನೆ ನಡೆಯಿತು. ಬಸ್ ನಿಲ್ಲಿಸಿ ತೆರಳಿದ ಚಾಲಕನ ನಿರ್ಲಕ್ಷ್ಯತನಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…