Featured

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ – ಅರ್ಧ ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ – vishwanews24

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ – ಅರ್ಧ ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ ; ಪ್ರಯಾಣಿಕರ ಆಕ್ರೋಶ

ಉಡುಪಿ: ಖಾಸಗಿ ಬಸ್‌ ಚಾಲಕ ಹಾಗೂ ಆತನ ಪ್ರಿಯತಮೆಯ ನಡುವೆ ವಾಗ್ವಾದ ಉಂಟಾಗಿ ಆತ ಬಸ್‌ ಅನ್ನು ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. ಉಡುಪಿಯಿಂದ ಸಂತೆಕಟ್ಟೆ ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ನಿಟ್ಟೂರು ಬಳಿ ಬಸ್‌ ಚಾಲಕನ ಪ್ರೇಯಸಿ ಬಸ್‌ ಹತ್ತಿದ್ದಾಳೆ.

ಅಲ್ಲಿಂದಲೇ ಅವರ ನಡುವೆ ವಾಗ್ಯುದ್ಧ ನಡೆದಿದೆ. ನಿರ್ವಾಹಕ ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಪ್ರೇಯಸಿಯ ಕಿರಿಕಿರಿಯಿಂದ ರೋಸಿ ಹೋದ ಚಾಲಕ ಆಶೀರ್ವಾದ್‌ ಚಿತ್ರಮಂದಿರದ ಸ್ವಲ್ಪ ಮುಂದಕ್ಕೆ ಬಸ್‌ ನಿಲ್ಲಿಸಿ ಹೋಗಿದ್ದಾನೆ. ಪ್ರೇಯಸಿ ಮತ್ತೊಂದು ದಾರಿ ಹಿಡಿದರು.

ಪ್ರಯಾಣಿಕರು ಇದನ್ನೆಲ್ಲ ನೋಡಿಯೇ ಬಾಕಿಯಾಗಿದ್ದಾರೆ. ಸಂಜೆ ವೇಳೆ ಈ ಘಟನೆ ನಡೆದಿದ್ದು, ಬಳಿಕ ಬಸ್‌ ನಿರ್ವಾಹಕನೇ ಬಸ್‌ ಅನ್ನು ಚಲಾಯಿಸಿಕೊಂಡು ಹೋದ ಘಟನೆ ನಡೆಯಿತು. ಬಸ್‌ ನಿಲ್ಲಿಸಿ ತೆರಳಿದ ಚಾಲಕನ ನಿರ್ಲಕ್ಷ್ಯತನಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

9 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

18 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

2 hours ago