ಉಡುಪಿ: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರಿಯತಮೆಯ ನಡುವೆ ವಾಗ್ವಾದ ಉಂಟಾಗಿ ಆತ ಬಸ್ ಅನ್ನು ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. ಉಡುಪಿಯಿಂದ ಸಂತೆಕಟ್ಟೆ ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಗೆ ನಿಟ್ಟೂರು ಬಳಿ ಬಸ್ ಚಾಲಕನ ಪ್ರೇಯಸಿ ಬಸ್ ಹತ್ತಿದ್ದಾಳೆ.
ಅಲ್ಲಿಂದಲೇ ಅವರ ನಡುವೆ ವಾಗ್ಯುದ್ಧ ನಡೆದಿದೆ. ನಿರ್ವಾಹಕ ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಪ್ರೇಯಸಿಯ ಕಿರಿಕಿರಿಯಿಂದ ರೋಸಿ ಹೋದ ಚಾಲಕ ಆಶೀರ್ವಾದ್ ಚಿತ್ರಮಂದಿರದ ಸ್ವಲ್ಪ ಮುಂದಕ್ಕೆ ಬಸ್ ನಿಲ್ಲಿಸಿ ಹೋಗಿದ್ದಾನೆ. ಪ್ರೇಯಸಿ ಮತ್ತೊಂದು ದಾರಿ ಹಿಡಿದರು.
ಪ್ರಯಾಣಿಕರು ಇದನ್ನೆಲ್ಲ ನೋಡಿಯೇ ಬಾಕಿಯಾಗಿದ್ದಾರೆ. ಸಂಜೆ ವೇಳೆ ಈ ಘಟನೆ ನಡೆದಿದ್ದು, ಬಳಿಕ ಬಸ್ ನಿರ್ವಾಹಕನೇ ಬಸ್ ಅನ್ನು ಚಲಾಯಿಸಿಕೊಂಡು ಹೋದ ಘಟನೆ ನಡೆಯಿತು. ಬಸ್ ನಿಲ್ಲಿಸಿ ತೆರಳಿದ ಚಾಲಕನ ನಿರ್ಲಕ್ಷ್ಯತನಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…