Featured

ಉಡುಪಿ : ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರ ಧ್ವಜಗಳ ಬಳಕೆ ನಿಷೇಧ – vishwanews24

ಉಡುಪಿ : ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರ ಧ್ವಜಗಳ ಬಳಕೆ ನಿಷೇಧ

ಉಡುಪಿ : ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇದಿಸಲಾಗಿರುತ್ತದೆ.

ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸಬಾರದು. ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬೇಕು ಹಾಗೂ ಸದರಿ ಕಾರ್ಯಕ್ರಮಗಳ ನಂತರ ಉಪಯೋಗಿಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.

ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರ ಸೆಕ್ಷನ್ 19 ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಉಲ್ಲಂಘಿಸಿದವರ ಮೇಲೆ ಆಯಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012, ಬೆಂಗಳೂರು, ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago