Featured

ಉಡುಪಿ: ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಿದ್ದು ನಿಯಮ ಉಲ್ಲಂಘಿಸಿದರೆ ದಂಡ : ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24

ಉಡುಪಿ: ರಾಜ್ಯದಾದ್ಯಂತ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಿದ್ದು, ಮುಂದೆ ಪ್ಲಾಸ್ಟಿಕ್‌ ಬಳಕೆ, ಸಂಗ್ರಹ, ತಯಾರಿಕೆ, ಸಾಗಾಟ, ಮಾರಾಟವನ್ನು ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಎಚ್ಚರಿಕೆ ನೀಡಿದರು.

ಗುರುವಾರ ನಗರಸಭೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ಲಾಸ್ಟಿಕ್‌ನಿಂದ ಸಮಸ್ಯೆಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು ನಿರ್ಧರಿಸಲಾಗಿದೆ. ಇದಕ್ಕೂ ಮುನ್ನ ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಮನೆಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಅ.2ರಂದು ಗಾಂಧಿಜಯಂತಿಯ ದಿನ ಬೃಹತ್ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರಸಭೆ, ಗ್ರಾಮ ಪಂಚಾಯ್ತಿಗಳ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಲಿದೆ. ಪ್ಲಾಸ್ಟಿಕ್ ಸಂಗ್ರಹ ಕಾರ್ಯ ಮಾಡಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುವುದು ಎಂದರು.

ಪ್ಲಾಸ್ಟಿಕ್‌ಗೆ ಬದಲಾಗಿ ಪರಿಸರಕ್ಕೆ ಪೂರಕವಾದ ಬದಲಿ ವಸ್ತುಗಳನ್ನು ಬಳಸಬೇಕು. ಮಾರುಕಟ್ಟೆಗೆ ಪ್ಲಾಸ್ಟಿಕ್ ಕವರ್ ಕೊಂಡೊಯ್ಯುವ ಬದಲು ಕೈಚೀಲಗಳನ್ನು ಬಳಸಿ ಎಂದು ಡಿಸಿ ಸಲಹೆ ನೀಡಿದರು.

ನಗರದಲ್ಲಿ ಫ್ಲೆಕ್ಸ್‌, ಬ್ಯಾನರ್‌, ಬಂಟಿಗ್ಸ್‌ಗಳನ್ನು ಹಾಕುವಂತಿಲ್ಲ. ಫ್ಲೆಕ್ಸ್‌ ಪ್ರಿಂಟ್ ಮಾಡುವ ಕಂಪೆನಿಗಳು ನಿಯಮ ಉಲ್ಲಂಘಿಸಿದರೆ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಪ್ಲಾಸ್ಟಿಕ್ ಬದಲಿಗೆ ಬಟ್ಟೆಯ ಫ್ಲೆಕ್ಸ್‌ ಬಳಸಬಹುದು. ನಗರಸಭೆ ಹಾಗೂ ಗ್ರಾಮ ಪಂಚಾಯ್ತಿ ನಿಗಧಿಪಡಿಸಿದ ಜಾಗದಲ್ಲಿ ಮಾತ್ರ ಹಾಕಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಕಡ್ಡಾಯ. ಹೆದ್ದಾರಿಗಳಲ್ಲಿ, ರಸ್ತೆಯ ತಿರುವುಗಳಲ್ಲಿ, ಅಪಘಾತ ಹೆಚ್ಚಾಗುವ ಸ್ಥಳಗಳಲ್ಲಿ ಜಾಹೀರಾತು ಫಲಕಗಳನ್ನು ಹಾಕುವಂತಿಲ್ಲ. ನಗರಸಭೆ ಅನುಮತಿ ನೀಡಬಾರದು ಎಂದರು.

ಪೋಸ್ಟರ್‌ಗಳು ನಗರದ ಸೌಂದರ್ಯವನ್ನು ಹಾಳು ಮಾಡುತ್ತಿವೆ. ಹಾಗಾಗಿ, ಎಲ್ಲೆಂದರಲ್ಲಿ ಪೋಸ್ಟರ್‌ಗಳನ್ನು ಹಚ್ಚುವಂತಿಲ್ಲ. ಸಿನಿಮಾ ಪ್ರಚಾರ ಪೋಸ್ಟರ್‌ಗಳನ್ನು ಚಿತ್ರಮಂದಿರದ ಆವರಣದಲ್ಲಿ ಮಾತ್ರ ಹಚ್ಚಬೇಕು. ನಗರಸಭೆ ಸೂಚಿಸಿದ ಜಾಗಗಳಲ್ಲಿ ಪೋಸ್ಟರ್ ಹಚ್ಚಬಹುದು. ಎಲ್ಲೆಂದರಲ್ಲಿ ಹಚ್ಚಿದರೆ, ಮಾಲೀಕರ ಹಾಗೂ ವಿತರಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಜತೆಗೆ, ಅನಧಿಕೃತ ಹೋರ್ಡಿಂಗ್‌ಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದರು.

ಸೆ.27ರಿಂದ ಅ.2ರವರೆಗೆ ನಗರದಾದ್ಯಂತ ನಗರಸಭೆ ಅಧಿಕಾರಿಗಳೂ ನಗರದ ವಾಣಿಜ್ಯ ಮಳಿಗೆಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳಲಿದ್ದಾರೆ. ಅ.2ರವರೆಗೆ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗುತ್ತದೆ. ಬಳಿಕ ದಂಡ ಪ್ರಯೋಗ ನಡೆಯಲಿದೆ. ಮೊದಲ ಬಾರಿಗೆ 1000, 2ನೇ ಬಾರಿಗೆ 2000, 3ನೇ ಬಾರಿಯ ಉಲ್ಲಂಘನೆಗೆ ಉದ್ದಿಮೆ ಪರವಾನಗಿ ರದ್ದು ಮಾಡಿ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

6 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago