ಉಡುಪಿ : ಪ್ಲಾಸ್ಟಿಕ್‌ ಮುಕ್ತ ಶ್ರೀ ಕೃಷ್ಣ ಮಠದ ಪರ್ಯಾಯ -Vishwanews24

ಉಡುಪಿ: ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಹೋಗಲಾಡಿಸುವುದು ಹೇಗೆಂದು ಅದನ್ನು ಉತ್ಪಾದಿಸಲು ಹಸಿರುನಿಶಾನೆ, ಅನುಮತಿ, ಸಬ್ಸಿಡಿ ಒದಗಿಸಿದ ಸರಕಾರವೇ ತರಬೇತಿ, ಸ್ವಚ್ಛತಾ ಅಭಿಯಾನ, ಮರುಬಳಕೆ ಚಿಂತನೆ ಹೀಗೆ ಬಗೆ ಬಗೆಯ ನಿರ್ಮೂಲನ ಯೋಜನೆಗಳನ್ನು ಆಯೋಜಿಸುತ್ತಿದೆ.

ಒಟ್ಟಾರೆ ಉತ್ಪಾದಿಸುವಾಗಲೂ, ನಿರ್ಮೂಲನಗೊಳಿಸುವಾಗಲೂ ಸಾಕಷ್ಟು ಹಣ ಖರ್ಚು ಜನರ ತಲೆಗೇ ಬೀಳುವುದು ಜನರಿಗೇ ಗೊತ್ತಿಲ್ಲ. ಮುಂಬರುವ ಅದಮಾರು ಮಠದ ಪರ್ಯಾಯದಲ್ಲಿ ಅನಿವಾರ್ಯವೆನಿಸಿದ ಪ್ಲಾಸ್ಟಿಕ್‌ಗಳನ್ನು ಬಳಸುವಾಗಲೇ ಹೊರಗಿಡುವ ಪ್ರಯತ್ನ ಮಾಡಲಾಗಿದೆ.

ಪ್ಲಾಸ್ಟಿಕ್‌ ಅಗ್ರಮಾನ್ಯ ಸ್ಥಾನಗಳಲ್ಲಿ ಅಲಂಕರಿಸುತ್ತಿದ್ದ ಫ್ಲೆಕ್ಸ್‌ ಬ್ಯಾನರ್‌, ಸ್ವಾಗತ ಕಮಾನುಗಳು ಅದಮಾರು ಮಠ ಪರ್ಯಾಯದಲ್ಲಿ ಪ್ಲಾಸ್ಟಿಕ್‌ರಹಿತವಾಗಿ, ದೇಸೀತನದಿಂದ ಎದ್ದು ನಿಂತಿವೆ. 10 ದೊಡ್ಡ ಕಮಾನುಗಳು, 22 ಸಣ್ಣ ಕಮಾನುಗಳು ಸೇರಿದಂತೆ 43 ಕಮಾನುಗಳ ರಚನೆಯಾಗಿವೆ. ಉಡುಪಿ ಜೋಡುಕಟ್ಟೆಯಿಂದ ತೆಂಕುಪೇಟೆ ದಾರಿಯಾಗಿ ರಥಬೀದಿಯನ್ನು ಪ್ರವೇ ಶಿಸುವ ದಾರಿಯಲ್ಲಿ ಹಾಕಿದ ಕಮಾನುಗಳಲ್ಲಿ ಅದಮಾರು ಮಠದ ಹಿಂದಿನ 32 ಗುರುಗಳ ಹೆಸರುಗಳನ್ನು ಬರೆದು ಗುರುಸ್ಮರಣೆ ಬರುವಂತೆ ಮಾಡಲಾಗಿದೆ.

ಜೋಡುಕಟ್ಟೆ, ಕಲ್ಪನಾ, ಕಲ್ಸಂಕ, ಅಂಬಾಗಿಲು, ಸಂಸ್ಕೃತ ಕಾಲೇಜು ಸರ್ಕಲ್‌, ಕಡಿಯಾಳಿ, ಬನ್ನಂಜೆ, ಕಿನ್ನಿಮೂಲ್ಕಿ ಬಳಿ ಪ್ರವೇಶ ತಾಣ, ಅಂಬಲಪಾಡಿ ಜಂಕ್ಷನ್‌ ಮೊದಲಾದೆಡೆ ದೊಡ್ಡ ಕಮಾನುಗಳು ನಿಂತಿವೆ. ನಗರದ ವಿವಿಧ ಪ್ರದೇಶಗಳಲ್ಲಿ ಸಣ್ಣ ಕಮಾನುಗಳನ್ನು ರಚಿಸಲಾಗಿದೆ.

ಉಡುಪಿ ರಥಬೀದಿಯಿಂದ ಜೋಡು ಕಟ್ಟೆವರೆಗೆ 400 ಕಂಬಗಳಲ್ಲಿ 800 ಗೂಡು ದೀಪಗಳನ್ನು ಅಳವಡಿ ಸಲಾಗುತ್ತದೆ. ಅದರೊಳಗೆ ಬಲೂನ್ಗಳು ಇರುತ್ತವೆ. ಇದು ಪ್ರಾಚೀನತೆಯನ್ನು ನೆನಪಿಗೆ ಬರುವಂತೆ ಮಾಡದಿರದು. 100 ದೊಡ್ಡ ಬ್ಯಾನರ್‌ಗಳನ್ನು ಉಡುಪಿ ಸುತ್ತಮುತ್ತ, 70 ದೊಡ್ಡ ಬ್ಯಾನರ್‌ಗಳು ಮಂಗಳೂರಿನಿಂದ ಕುಂದಾಪುರದ ವರೆಗೆ, 200 ಸಣ್ಣ ಬ್ಯಾನರ್‌ಗಳು ಮಂಗಳೂರಿನಿಂದ ಕುಂದಾಪುರ, ಉಡುಪಿಯಿಂದ ಕಾರ್ಕಳದವರೆಗೆ ಕಟ್ಟಲಾಗಿದೆ. ಕಮಾನುಗಳ ಸುತ್ತ ಪ್ಲಾಸ್ಟಿಕ್‌ನಿಂದ ತಯಾರಿಸಿದ ಬಣ್ಣದ ಹೊದಿಕೆಯನ್ನು ಹೊದಿಸಲಾಗುತ್ತಿತ್ತು. ಈ ಸ್ಥಾನದಲ್ಲಿ ಈಗ ಬಟ್ಟೆಗಳನ್ನೇ ಬಳಸಲಾಗಿದೆ. ಜನಪದ, ದೇಸೀ ಶೈಲಿ ಕಮಾನುಗಳಲ್ಲಿ ಎದ್ದು ಕಾಣುತ್ತಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago