Featured

ಉಡುಪಿ : ಫೆ. 11 ಮತ್ತು 12 ರಂದು ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ: ಸಚಿವ ವಿ ಸುನೀಲ್ ಕುಮಾರ್ – Vishwanews24

ಉಡುಪಿ : ಫೆ. 11 ಮತ್ತು 12 ರಂದು ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ: ಸಚಿವ ವಿ ಸುನೀಲ್ ಕುಮಾರ್

ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎ0. ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ಹೇಳಿದರು.

ಅವರು ಇಂದು ನಗರದ ಎಂ.ಜಿ.ಎ0. ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಯಕ್ಷಗಾನಕ್ಕೆ ತನ್ನದೇ ಆದ ಹಿರಿಮೆ ಗರಿಮೆ ಇದ್ದು, ತುಳುನಾಡಿನಲ್ಲಿ ಇದಕ್ಕೆ ಇನ್ನೂ ಹೆಚ್ಚಿನ ಮಹತ್ವ ಇದೆ. ಯಕ್ಷಗಾನದಲ್ಲಿ ಪ್ರಸ್ತುತ ಇರುವ ಮತ್ತು ಮುಂದಿನ ದಿನದಲ್ಲಿ ಎದುರಾಗುವ ಹೊಸ ರೀತಿಯ ಸವಾಲುಗಳನ್ನು ಎದುರಿಸುವ ಬಗ್ಗೆ, ಹೊಸ ಪೀಳಿಗೆಗೆ ಯಕ್ಷಗಾನದ ಬಗ್ಗೆ ತಿಳಿಸಲು ಸೇರಿದಂತೆ ಯಕ್ಷಗಾನ ಬೆಳವಣಿಗೆ ಕುರಿತಂತೆ ಸಮ್ಮೇಳನದಲ್ಲಿ ಸಮಗ್ರ ಚರ್ಚೆ ನಡೆಯಲಿದೆ ಎಂದರು.

ಯಕ್ಷಗಾನ ಕಲಾವಿದರು ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಬಳುವಳಿಯನ್ನು ನೀಡಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ಯಾವುದೇ ಒಂದು ಆಂಗ್ಲ ಭಾಷೆಯನ್ನು ಬಳಕೆ ಮಾಡದೇ ನಡೆಸುತ್ತಾ ಬಂದಿರುವುದು ಒಂದು ಮಹತ್ವವಾದ ಕೆಲಸ. ಇದು ಅವರ ಪ್ರಬುದ್ಧತೆ ಮತ್ತು ಹಿರಿಮೆಯನ್ನು ತೋರುತ್ತದೆ ಎಂದ ಅವರು, ಯಕ್ಷಗಾನ ಸಮ್ಮೇಳನವು ಎಲ್ಲಾ ಸಮ್ಮೇಳನಗಳಿಗೆ ಮಾದರಿಯಾಗುವ ರೀತಿಯಲ್ಲಿ ನಡೆಯಬೇಕು ಎಂದರು.

2 ದಿನಗಳ ಕಾಲ ನಡೆಯುವ ಈ ಸಮ್ಮೇಳನಕ್ಕಾಗಿ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಗಳನ್ನು ಬಿಡುಗಡೆಗೊಳಿಸುವುದಾಗಿ ಸಚಿವರು
ಹೇಳಿದರು. ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದ ಸಚಿವರು, ಅಧ್ಯಕ್ಷರಾಗಿ ಡಾ.ಪ್ರಭಾಕರ ಜೋಷಿ ಅವರನ್ನು ಸಚಿವರು ಘೋಷಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ರಾಜ್ಯದಲ್ಲೇ ಪ್ರಥಮ ಬಾರಿಗೆ ನಡೆಯುತ್ತಿರುವ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನದ ಅಭೂತಪೂರ್ವ ಯಶಸ್ಸಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲೆಯ ಹಿರಿಯ ಯಕ್ಷಗಾನ ಕಲಾವಿದರು, ಯಕ್ಷಗಾನ ಆಸಕ್ತರು ಹಾಗೂ ಸಾರ್ವಜನಿಕರು ಮತ್ತು ಸಂಘ-ಸ0ಸ್ಥೆಗಳ ಸಹಕಾರ ಪಡೆಯಲಾಗುವುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ, ಯಕ್ಷಗಾನ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ. ಜಿ.ಎಲ್.ಹೆಗಡೆ, ಯಕ್ಷಗಾನವು ಕನ್ನಡ ಭಾಷೆಯ ಸಮೃದ್ಧ ಬೆಳವಣಿಗೆಗೆ ಅತೀ ಹೆಚ್ಚಿನ ಕೊಡುಗೆ ನೀಡಿದೆ. ಕನ್ನಡದ ಕಾವ್ಯಗಳನ್ನು ಕಟ್ಟಿ ನಿಲ್ಲಿಸಿದೆ. ಇದುವರೆಗೆ 52 ಮಂದಿ ಯಕ್ಷಗಾನದ ವಿವಿಧ ವಿಷಯಗಳಿಗೆ ಸಂಬ0ಧಿಸಿದ0ತೆ ಪಿ.ಹೆಚ್.ಡಿ ಪಡೆದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ, ಸಾಲಿಗ್ರಾಮ ಮತ್ತು ಇತರೆ ಮೇಳಗಳ ಮುಖ್ಯಸ್ಥ ಪಿ.ಕಿಶನ್ ಹೆಗ್ಡೆ, ಮಂದಾರ್ತಿ ಯಕ್ಷಗಾನ ಮೇಳದ ಅಧ್ಯಕ್ಷ ಧನಂಜಯ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ಸ್ವಾಗತಿಸಿದರು, ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟಾçರ್ ಶಿವರುದ್ರಪ್ಪ ವಂದಿಸಿದರು. ಮುರಳಿ ಕಡೆಕಾರ್ ನಿರೂಪಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

16 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

16 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago