Featured

ಉಡುಪಿ: ಫೆ. 15 ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವ ಆಚರಣೆ – vishwanews24

ಉಡುಪಿ: ಫೆ. 15 ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವ ಆಚರಣೆ

ಉಡುಪಿ: ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಶಿರೂರು ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿ, ಫೆ. 15, ಸಂಜೆ 6 ಗಂಟೆಯಿಂದ ಫೆ. 16ರ ಬೆಳಿಗ್ಗೆ 6 ಗಂಟೆಯ ತನಕ ಅಖಂಡ ಶಿವರಾತ್ರಿ ಉತ್ಸವ ನಡೆಯಲಿದೆ. ನಿರಂತರ ಪೂಜೆ, ಪಾರಾಯಣ, ಉಪನ್ಯಾಸ, ಭಜನೆ ಕಾರ್ಯಕ್ರಮಗಳು ಜರುಗಲಿವೆ ಎಂದರು.

 ಇದನ್ನೂ ಓದಿ:

ವಿಷ್ಣುಸಹಸ್ರನಾಮ, ಪಾರಾಯಾಣಾದಿ, ಶಿವಪಂಚಾಕ್ಷರಿ ಮಂತ್ರ ಜಪವನ್ನು ಹಮ್ಮಿಕೊಳ್ಳಲಾಗಿದೆ. ಫೆ. 15ರ ಸಂಜೆ 5.45 ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಯಿಂದ 6.30 ರ ವರೆಗೆ ಪರ್ಯಾಯ ಶ್ರೀಗಳು ಸಂದೇಶ ನೀಡಲಿದ್ದಾರೆ.  ಸಂಜೆ 6.30 ರಿಂದ 7 ಗಂಟೆಗೆ ಪ್ರವಚನ, ರಾತ್ರಿ 7 ಗಂಟೆಯಿಂದ ರಾತ್ರಿ 9.30 ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ರಾತ್ರಿ 9.30 ರಿಂದ 10 ಗಂಟೆವರೆಗೆ ಪೂಜೆ, ರಾತ್ರಿ 10 ಗಂಟೆಯಿಂದ 11 ಗಂಟೆಗೆ ಪ್ರವಚನ, ರಾತ್ರಿ 11 ಗಂಟೆಯಿAದ 11 ಗಂಟೆಯಿಂದ ರಾತ್ರಿ 12.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ, ರಾತ್ರಿ 12.30 ರಿಂದ 2.30 ರಿಂದ ಕುಳಿತು ಭಜನೆ ಪೂಜೆ, ರಾತ್ರಿ 2.30 ರಿಂದ 4 ಗಂಟೆವರೆಗೆ ಕುಣಿತ ಭಜನೆ, ರಾತ್ರಿ 4 ಗಂಟೆಯಿಂದ 5.30 ರ ವರೆಗೆ ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ ನಡೆಯಲಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀ ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.

 ಇದನ್ನೂ ಓದಿ:

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago