ಉಡುಪಿ: ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಶಿರೂರು ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿ, ಫೆ. 15, ಸಂಜೆ 6 ಗಂಟೆಯಿಂದ ಫೆ. 16ರ ಬೆಳಿಗ್ಗೆ 6 ಗಂಟೆಯ ತನಕ ಅಖಂಡ ಶಿವರಾತ್ರಿ ಉತ್ಸವ ನಡೆಯಲಿದೆ. ನಿರಂತರ ಪೂಜೆ, ಪಾರಾಯಣ, ಉಪನ್ಯಾಸ, ಭಜನೆ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಇದನ್ನೂ ಓದಿ:
ವಿಷ್ಣುಸಹಸ್ರನಾಮ, ಪಾರಾಯಾಣಾದಿ, ಶಿವಪಂಚಾಕ್ಷರಿ ಮಂತ್ರ ಜಪವನ್ನು ಹಮ್ಮಿಕೊಳ್ಳಲಾಗಿದೆ. ಫೆ. 15ರ ಸಂಜೆ 5.45 ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಯಿಂದ 6.30 ರ ವರೆಗೆ ಪರ್ಯಾಯ ಶ್ರೀಗಳು ಸಂದೇಶ ನೀಡಲಿದ್ದಾರೆ. ಸಂಜೆ 6.30 ರಿಂದ 7 ಗಂಟೆಗೆ ಪ್ರವಚನ, ರಾತ್ರಿ 7 ಗಂಟೆಯಿಂದ ರಾತ್ರಿ 9.30 ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ರಾತ್ರಿ 9.30 ರಿಂದ 10 ಗಂಟೆವರೆಗೆ ಪೂಜೆ, ರಾತ್ರಿ 10 ಗಂಟೆಯಿಂದ 11 ಗಂಟೆಗೆ ಪ್ರವಚನ, ರಾತ್ರಿ 11 ಗಂಟೆಯಿAದ 11 ಗಂಟೆಯಿಂದ ರಾತ್ರಿ 12.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ, ರಾತ್ರಿ 12.30 ರಿಂದ 2.30 ರಿಂದ ಕುಳಿತು ಭಜನೆ ಪೂಜೆ, ರಾತ್ರಿ 2.30 ರಿಂದ 4 ಗಂಟೆವರೆಗೆ ಕುಣಿತ ಭಜನೆ, ರಾತ್ರಿ 4 ಗಂಟೆಯಿಂದ 5.30 ರ ವರೆಗೆ ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ ನಡೆಯಲಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀ ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.
ಇದನ್ನೂ ಓದಿ:
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…