ಉಡುಪಿ: ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಶಿರೂರು ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿ, ಫೆ. 15, ಸಂಜೆ 6 ಗಂಟೆಯಿಂದ ಫೆ. 16ರ ಬೆಳಿಗ್ಗೆ 6 ಗಂಟೆಯ ತನಕ ಅಖಂಡ ಶಿವರಾತ್ರಿ ಉತ್ಸವ ನಡೆಯಲಿದೆ. ನಿರಂತರ ಪೂಜೆ, ಪಾರಾಯಣ, ಉಪನ್ಯಾಸ, ಭಜನೆ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಇದನ್ನೂ ಓದಿ:
ವಿಷ್ಣುಸಹಸ್ರನಾಮ, ಪಾರಾಯಾಣಾದಿ, ಶಿವಪಂಚಾಕ್ಷರಿ ಮಂತ್ರ ಜಪವನ್ನು ಹಮ್ಮಿಕೊಳ್ಳಲಾಗಿದೆ. ಫೆ. 15ರ ಸಂಜೆ 5.45 ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಯಿಂದ 6.30 ರ ವರೆಗೆ ಪರ್ಯಾಯ ಶ್ರೀಗಳು ಸಂದೇಶ ನೀಡಲಿದ್ದಾರೆ. ಸಂಜೆ 6.30 ರಿಂದ 7 ಗಂಟೆಗೆ ಪ್ರವಚನ, ರಾತ್ರಿ 7 ಗಂಟೆಯಿಂದ ರಾತ್ರಿ 9.30 ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ರಾತ್ರಿ 9.30 ರಿಂದ 10 ಗಂಟೆವರೆಗೆ ಪೂಜೆ, ರಾತ್ರಿ 10 ಗಂಟೆಯಿಂದ 11 ಗಂಟೆಗೆ ಪ್ರವಚನ, ರಾತ್ರಿ 11 ಗಂಟೆಯಿAದ 11 ಗಂಟೆಯಿಂದ ರಾತ್ರಿ 12.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ, ರಾತ್ರಿ 12.30 ರಿಂದ 2.30 ರಿಂದ ಕುಳಿತು ಭಜನೆ ಪೂಜೆ, ರಾತ್ರಿ 2.30 ರಿಂದ 4 ಗಂಟೆವರೆಗೆ ಕುಣಿತ ಭಜನೆ, ರಾತ್ರಿ 4 ಗಂಟೆಯಿಂದ 5.30 ರ ವರೆಗೆ ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ ನಡೆಯಲಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀ ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.
ಇದನ್ನೂ ಓದಿ:
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…