Featured

ಉಡುಪಿ: ಫೈನಾನ್ಸ್ ಗೆ ಮ್ಯಾನೇಜರ್ ಮತ್ತು‌ ಲೋನ್ ಆಫೀಸರ್ ಗಳಿಂದಲೇ ವಂಚನೆ ; ಪ್ರಕರಣ ದಾಖಲು – vishwanews24

ಉಡುಪಿ: ಫೈನಾನ್ಸ್’ಗೆ ಮ್ಯಾನೇಜರ್ ಮತ್ತು‌ ಲೋನ್ ಆಫೀಸರ್’ಗಳಿಂದಲೇ ವಂಚನೆ ; ಪ್ರಕರಣ ದಾಖಲು

ಉಡುಪಿ: ಫೈನಾನ್ಸ್ ಒಂದಕ್ಕೆ ಮ್ಯಾನೇಜರ್ ಮತ್ತು ಲೋನ್ ಆಫೀಸರ್’ಗಳೆ ಮೋಸ ಮಾಡಿರುವ ಕುರಿತು ಪ್ರಕರಣವೊಂದು ದಾಖಲಾಗಿದೆ.

ಈ ಕುರಿತು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್‌ ಲಿಮಿಟೆಡ್‌ , ಉಡುಪಿ ಶಾಖೆಯ ಏರಿಯಾ ಮ್ಯಾನೇಜರ್ ಬಸವರಾಜ್ ಎಂಬುವವರು ದೂರು ದಾಖಲಿಸಿದ್ದಾರೆ.

ದೂರಿನ ಪ್ರಕಾರ ಬ್ಯಾಂಕ್‌ನಲ್ಲಿ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾರವರು ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುವ ಕರ್ತವ್ಯವನ್ನು ಮಾಡಿಕೊಂಡಿರುತ್ತಾರೆ. ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾರವರು ಸಂಘದ ಸದಸ್ಯರು ಕಟ್ಟಿದ ಲೋನ್‌ ಹಣದಲ್ಲಿ ರೂಪಾಯಿ 1,25,787 ಹಣವನ್ನು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್‌ ಲಿಮಿಟೆಡ್‌ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿರುತ್ತಾರೆ ಹಾಗೂ ಲೋನ್‌ ಆಫೀಸರ್‌ಗಳಾದ ಅಕ್ಷಯ್‌ ರವರು 49,000/- ಮತ್ತು ದೀಕ್ಷಿತ್‌ ರವರು 3,00,000/- ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು , ಸಂಸ್ಥೆಯ ಮ್ಯಾನೇಜರ್‌ರವರೊಂದಿಗೆ ಸೇರಿಕೊಂಡು ಈ ಮೂವರೂ ಒಟ್ಟು ರೂಪಾಯಿ 4,74,787/- ಹಣವನ್ನು ಸಂಸ್ಥೆಗೆ ಕಟ್ಟದೇ ಮೋಸ ಹಾಗೂ ನಂಬಿಕೆ ದ್ರೋಹ ಮಾಡಿರುವ ಕುರಿತು ದೂರು ದಾಖಲಿಸಲಾಗಿದೆ.

ಆ.29 ರಂದು ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಬಸವರಾಜ , ವೈಸ್‌ ಪ್ರೆಸಿಡೆಂಟ್‌ ಮತ್ತು ಸಹಾಯಕ ವೈಸ್‌ ಪ್ರೆಸಿಡೆಂಟ್‌ ಕೊಟ್ರೇಶ , ಸ್ಟೇಟ್‌ ವೈಸ್‌ ಪ್ರೆಸಿಡೆಂಟ್‌ ಆದ ಮಹೇಶ್‌ ರವರು ಸಂಸ್ಥೆಯ ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡಿದಾಗ ಸಂಸ್ಥೆಯ ನಗದು ಕ್ಲೋಸಿಂಗ್‌ ಬ್ಯಾಲೆನ್ಸ್‌ ಕಡಿಮೆ ಇದ್ದ ಕಾರಣ ವಿಚಾರ ಬೆಳಕಿಗೆ ಬಂದಿದೆ. ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago