ಉಡುಪಿ: ಫೈನಾನ್ಸ್ ಒಂದಕ್ಕೆ ಮ್ಯಾನೇಜರ್ ಮತ್ತು ಲೋನ್ ಆಫೀಸರ್’ಗಳೆ ಮೋಸ ಮಾಡಿರುವ ಕುರಿತು ಪ್ರಕರಣವೊಂದು ದಾಖಲಾಗಿದೆ.
ಈ ಕುರಿತು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್ ಲಿಮಿಟೆಡ್ , ಉಡುಪಿ ಶಾಖೆಯ ಏರಿಯಾ ಮ್ಯಾನೇಜರ್ ಬಸವರಾಜ್ ಎಂಬುವವರು ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ ಬ್ಯಾಂಕ್ನಲ್ಲಿ ಒಂದು ವರ್ಷದಿಂದ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್ ಲತೀಫ್ ಖಾಸಿಂ ಮುಲ್ಲಾರವರು ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುವ ಕರ್ತವ್ಯವನ್ನು ಮಾಡಿಕೊಂಡಿರುತ್ತಾರೆ. ಅಬ್ದುಲ್ ಲತೀಫ್ ಖಾಸಿಂ ಮುಲ್ಲಾರವರು ಸಂಘದ ಸದಸ್ಯರು ಕಟ್ಟಿದ ಲೋನ್ ಹಣದಲ್ಲಿ ರೂಪಾಯಿ 1,25,787 ಹಣವನ್ನು ಸ್ಪಂದನಾ ಸ್ಪೂರ್ತಿ ಫೈನಾನ್ಸಿಯಲ್ ಲಿಮಿಟೆಡ್ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿರುತ್ತಾರೆ ಹಾಗೂ ಲೋನ್ ಆಫೀಸರ್ಗಳಾದ ಅಕ್ಷಯ್ ರವರು 49,000/- ಮತ್ತು ದೀಕ್ಷಿತ್ ರವರು 3,00,000/- ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು , ಸಂಸ್ಥೆಯ ಮ್ಯಾನೇಜರ್ರವರೊಂದಿಗೆ ಸೇರಿಕೊಂಡು ಈ ಮೂವರೂ ಒಟ್ಟು ರೂಪಾಯಿ 4,74,787/- ಹಣವನ್ನು ಸಂಸ್ಥೆಗೆ ಕಟ್ಟದೇ ಮೋಸ ಹಾಗೂ ನಂಬಿಕೆ ದ್ರೋಹ ಮಾಡಿರುವ ಕುರಿತು ದೂರು ದಾಖಲಿಸಲಾಗಿದೆ.
ಆ.29 ರಂದು ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಬಸವರಾಜ , ವೈಸ್ ಪ್ರೆಸಿಡೆಂಟ್ ಮತ್ತು ಸಹಾಯಕ ವೈಸ್ ಪ್ರೆಸಿಡೆಂಟ್ ಕೊಟ್ರೇಶ , ಸ್ಟೇಟ್ ವೈಸ್ ಪ್ರೆಸಿಡೆಂಟ್ ಆದ ಮಹೇಶ್ ರವರು ಸಂಸ್ಥೆಯ ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡಿದಾಗ ಸಂಸ್ಥೆಯ ನಗದು ಕ್ಲೋಸಿಂಗ್ ಬ್ಯಾಲೆನ್ಸ್ ಕಡಿಮೆ ಇದ್ದ ಕಾರಣ ವಿಚಾರ ಬೆಳಕಿಗೆ ಬಂದಿದೆ. ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…